Homeಮುಖಪುಟಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

ಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

- Advertisement -
- Advertisement -

ಮಹಾರಾಷ್ಟ್ರದ ನವೀ ಮುಂಬಯಿಯಲ್ಲಿ ನಿರುದ್ಯೋಗಿ ಯುವಕನೊಬ್ಬ ತನ್ನ ನಾದಿನಿ ಮತ್ತು ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡಿ ಬಂಧನಕ್ಕೊಳಗಾಗಿರುವ ಘಟನೆ ಜರುಗಿದೆ.

29 ವರ್ಷದ ಸುರೇಶ್ ಚವಾಣ್ ಎಂಬುವವನೆ ಆರೋಪಿಯಾಗಿ ಜೈಲಿನಲ್ಲಿರುವ ಯುವಕನಾಗಿದ್ದಾನೆ. ಈತನಿಗೆ ಎಷ್ಟೇ ಹುಡುಕಿದ್ದರೂ ಸರಿಯಾದ ಉದ್ಯೋಗ ಸಿಕ್ಕಿರಲಿಲ್ಲ. ಆದರೆ ಈತನ ತಮ್ಮನಿಗೆ ಉದ್ಯೋಗ ಸಿಕ್ಕು ಆತ ಮದುವೆಯಾಗಿ ಮನೆ ಮಾಡಿಕೊಂಡಿದ್ದ. ಪನ್ವೆಲ್ ಸಿಟಿ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ವ್ಯಾಪ್ತಿಯಲ್ಲಿರುವ ಮನೆಯಲ್ಲಿಯೇ ಸುರೇಶ್ ಸಹ ಇದ್ದುಕೊಂಡು ಕಾಲ ಕಳೆಯುತ್ತಿದ್ದ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸುರೇಶ್ ನಿರುದ್ಯೋಗಿಯಾಗಿದ್ದರಿಂದ ಸಹೋದರರ ನಡುವಿನ ಸಂಬಂಧವು ಬಿಗಡಾಯಿಸಿದೆ. ಜಗಳವಾಗಿ ಸುರೇಶ್ ನನ್ನು ಆತನ ತಮ್ಮ ಮನೆಯಿಂದ ಓಡಿಸಿದ್ದಾನೆ. ಇದರಿಂದ ಖಿನ್ನತೆಗೊಳಗಾಗಿದ್ದ ಸುರೇಶ್ ಹಲವಾರು ಕಡೆ ಅಲೆದಾಡಿ ಉದ್ಯೋಗ ಸಿಗದೇ ಅದೇ ಕೋಪದಲ್ಲಿ ತನ್ನ ತಮ್ಮನ ಮನೆಗೆ ಸೋಮವಾರ ರಾತ್ರಿ ಮತ್ತೆ ಬಂದಿದ್ದಾನೆ.

ಆ ಸಂದರ್ಭದಲ್ಲಿ ತನ್ನ ತಮ್ಮ ಕೆಲಸಕ್ಕೆ ಹೋಗಿದ್ದು ಮನೆಯಲ್ಲಿದ್ದು ತನ್ನ ನಾದಿನಿ ಜೈಶ್ರೀಯೊಂದಿಗೆ ಜಗಳವಾಗಿ ಆಕೆಯನ್ನು ಮತ್ತು ಆಕೆಯ ಎರಡು ವರ್ಷದ ಪುತ್ರ ಅವಿನಾಶ್ ಅವರನ್ನು ಒಬ್ಬರ ನಂತರ ಒಬ್ಬರಂತೆ ದಿಂಬಿನಿಂದ ಮುಖಮುಚ್ಚಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ರಾತ್ರಿ 11:30ರ ಸುಮಾರಿಗೆ ತನ್ನ ಕಿರಿಯ ಸಹೋದರ ಕಚೇರಿಯಿಂದ ಮನೆಗೆ ಮರಳುವವರೆಗೂ ಆರೋಪಿ ಸುರೇಶ್ ಶವಗಳ ಪಕ್ಕದಲ್ಲಿ ಕುಳಿತಿದ್ದರು” ಎಂದು ಪೊಲೀಸ್ ಅಧಿಕಾರಿ ದೇವಿದಾಸ್ ಸೋನವಾನೆ ಹೇಳಿದ್ದಾರೆ. ಅವನ ತಮ್ಮ ಪೊಲೀಸರಿಗೆ ತಿಳಿಸಿದ ನಂತರ, ಸುರೇಶ್ ಅವರನ್ನು ಮಂಗಳವಾರ ಆ ಫ್ಲ್ಯಾಟ್‌ನಿಂದ ಬಂಧಿಸಲಾಗಿದೆ.

ತನ್ನ ಸಹೋದರನು ಜೀವನಕ್ಕಾಗಿ ಸ್ವಂತ ಹಣ ಸಂಪಾದಿಸದ ಕಾರಣಕ್ಕಾಗಿ ಅವನನ್ನು ತನ್ನ ಫ್ಲ್ಯಾಟ್‌ನಿಂದ ಓಡಿಸಿದ್ದರಿಂದ ಆರೋಪಿ ಸುರೇಶ್ ನಿರಾಶೆಗೊಂಡಿದ್ದಾನೆಂದು ತೋರುತ್ತದೆ, ಇದೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿ ಸೋನವಾನೆ ಹೇಳಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎನ್ನುತ್ತಿದ್ದಾರೆ.

ಮೂಲ: ಎನ್.ಡಿ.ಟಿ.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...