Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....