Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...