Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...