Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...