Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...