Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...