Homeಮುಖಪುಟಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

- Advertisement -
- Advertisement -

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ ಪುತ್ರರಾದ ರಾಜೇಂದ್ರ ಅಲಿಯಾಸ್ ರಾಜ್ ಮತ್ತು ವಿಕಾಸ್ ಅಲಿಯಾಸ್ ವಿಕ್ಕಿ ಅವರು ನರ್ಸ್ ಮತ್ತು ಅವರ ಮನೆಯವರಿಗೆ ಜಾತಿ ಹಿಡಿದು ಹೀಯಾಳಿಸುತ್ತಾ ಅವರ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ದಾಳಿಯ ಸಮಯದಲ್ಲಿ ನರ್ಸ್ ಮತ್ತು ಆಕೆಯ ತಾಯಿ ಮತ್ತು ಕಿರಿಯ ಸಹೋದರನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ.

ದಾಳಿಕೋರರು ಸಂತ್ರಸ್ತೆಯ ಎದೆ ಮತ್ತು ಮುಖದ ಮೇಲೆ ಗೀಚಿ, ಅವಳನ್ನು ಅವಮಾನಿಸಿ, ಅವಳ ಜಾತಿ ಗುರುತನ್ನು ಗುರಿಯಾಗಿಸಿಕೊಂಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್ ನೋಟ್ ನಲ್ಲಿ ಅವರು ಆರೋಪಿಗಳನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ ಮತ್ತು ಹಲ್ಲೆಯು ಜಾತಿ ಪ್ರೇರಿತವಾಗಿ ಎಂದು ವಿವರಿಸಿದ್ದಾರೆ. “ಅವರು ನನ್ನ ಎದೆಗೆ ಪರಚಿ, ನನ್ನ ಘನತೆಗೆ ಘಾಸಿಯನ್ನುಂಟು ಮಾಡಿದರು. ಜಾತಿ ತಾರತಮ್ಯ ಮತ್ತು  ಕೊಳಕು ಮನಸ್ಥಿತಿಯಿಂದ ತುಂಬಿದ ಈ ಜನರ ಮಧ್ಯೆ ನನ್ನ ಜೀವನವನ್ನು ಸಾಗಿಸಲು ಬಯಸುವುದಿಲ್ಲ” ಎಂದು ಟಿಪ್ಪಣಿಯಲ್ಲಿ ಬರೆಯಲಾಗಿದೆ.

ಪತ್ರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಸಹ ತೋರಿಸಿದೆ. ಮಾತಾ ಕಾ ಥಾನ್ ಪೊಲೀಸ್ ಠಾಣೆಯಲ್ಲಿ ಒಂಬತ್ತು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದೆವು ಎಂದು ಕುಟುಂಬ ಹೇಳಿದೆ. ಆದರೆ ಆರೋಪಿಗಳ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾತ್ರ ದಾಖಲಿಸಲಾಗಿದೆ, ನಂತರ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ಭನ್ವರ್ ಸಿಂಗ್ ಜಖಡ್ ಮತ್ತು ಸ್ಥಳೀಯ ಕೌನ್ಸಿಲರ್ ಜಾನಿ ದೇವಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. “ಅವರಿಗೆ ಏನೂ ಆಗುವುದಿಲ್ಲ” ಎಂದು SHO ಹೇಳಿದ್ದರು ಎಂದು ನರ್ಸ್ ಆರೋಪಿಸಿದ್ದಾರೆ ಮತ್ತು ಕೌನ್ಸಿಲರ್ ಅವರು ಆರೋಪಿಗಳು “ಉನ್ನತ ಮಟ್ಟದ ಸಂಪರ್ಕಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದರು ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಯಾರೂ ನನ್ನ ಪರವಾಗಿ ನಿಲ್ಲಲ್ಲಿ. ಪೊಲೀಸರು ನಮ್ಮವರಲ್ಲ. ವ್ಯವಸ್ಥೆಯು ನಮ್ಮದಲ್ಲ. ಇಲ್ಲಿ ನನ್ನದೇನೂ ಅಲ್ಲ” ಎಂದು ಡೆತ್ ನೋಟಿನಲ್ಲಿ ಇವು ಕೊನೆ ಮಾತುಗಳು ಎಂದು ನರ್ಸ್ ಬರೆದಿದ್ದಾರೆ

ಈ ಘಟನೆಯು ಪ್ರದೇಶದಲ್ಲಿ ಆಕ್ರೋಶದ ಪ್ರತಿಭಟನೆಗಳಿಗೆ ಕಾರಣವಾಗಿದೆ. ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನಾಕಾರರು ಜಮಾಯಿಸಿ ಭದ್ವಾಸಿಯಾ ರಸ್ತೆಯನ್ನು ತಡೆದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು SHO ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಸಂತ್ರಸ್ತ ನರ್ಸ್ ನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಪ್ರತಿಭಟನೆಗಳು ಮತ್ತು ಸಾರ್ವಜನಿಕರ ಆಕ್ರೋಶದ ನಂತರ, ಪೊಲೀಸರು ಈಗ ನಾಲ್ವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...