Homeಮುಖಪುಟಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

- Advertisement -
- Advertisement -

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ ಪುತ್ರರಾದ ರಾಜೇಂದ್ರ ಅಲಿಯಾಸ್ ರಾಜ್ ಮತ್ತು ವಿಕಾಸ್ ಅಲಿಯಾಸ್ ವಿಕ್ಕಿ ಅವರು ನರ್ಸ್ ಮತ್ತು ಅವರ ಮನೆಯವರಿಗೆ ಜಾತಿ ಹಿಡಿದು ಹೀಯಾಳಿಸುತ್ತಾ ಅವರ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ದಾಳಿಯ ಸಮಯದಲ್ಲಿ ನರ್ಸ್ ಮತ್ತು ಆಕೆಯ ತಾಯಿ ಮತ್ತು ಕಿರಿಯ ಸಹೋದರನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ.

ದಾಳಿಕೋರರು ಸಂತ್ರಸ್ತೆಯ ಎದೆ ಮತ್ತು ಮುಖದ ಮೇಲೆ ಗೀಚಿ, ಅವಳನ್ನು ಅವಮಾನಿಸಿ, ಅವಳ ಜಾತಿ ಗುರುತನ್ನು ಗುರಿಯಾಗಿಸಿಕೊಂಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್ ನೋಟ್ ನಲ್ಲಿ ಅವರು ಆರೋಪಿಗಳನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ ಮತ್ತು ಹಲ್ಲೆಯು ಜಾತಿ ಪ್ರೇರಿತವಾಗಿ ಎಂದು ವಿವರಿಸಿದ್ದಾರೆ. “ಅವರು ನನ್ನ ಎದೆಗೆ ಪರಚಿ, ನನ್ನ ಘನತೆಗೆ ಘಾಸಿಯನ್ನುಂಟು ಮಾಡಿದರು. ಜಾತಿ ತಾರತಮ್ಯ ಮತ್ತು  ಕೊಳಕು ಮನಸ್ಥಿತಿಯಿಂದ ತುಂಬಿದ ಈ ಜನರ ಮಧ್ಯೆ ನನ್ನ ಜೀವನವನ್ನು ಸಾಗಿಸಲು ಬಯಸುವುದಿಲ್ಲ” ಎಂದು ಟಿಪ್ಪಣಿಯಲ್ಲಿ ಬರೆಯಲಾಗಿದೆ.

ಪತ್ರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಸಹ ತೋರಿಸಿದೆ. ಮಾತಾ ಕಾ ಥಾನ್ ಪೊಲೀಸ್ ಠಾಣೆಯಲ್ಲಿ ಒಂಬತ್ತು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದೆವು ಎಂದು ಕುಟುಂಬ ಹೇಳಿದೆ. ಆದರೆ ಆರೋಪಿಗಳ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾತ್ರ ದಾಖಲಿಸಲಾಗಿದೆ, ನಂತರ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ಭನ್ವರ್ ಸಿಂಗ್ ಜಖಡ್ ಮತ್ತು ಸ್ಥಳೀಯ ಕೌನ್ಸಿಲರ್ ಜಾನಿ ದೇವಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. “ಅವರಿಗೆ ಏನೂ ಆಗುವುದಿಲ್ಲ” ಎಂದು SHO ಹೇಳಿದ್ದರು ಎಂದು ನರ್ಸ್ ಆರೋಪಿಸಿದ್ದಾರೆ ಮತ್ತು ಕೌನ್ಸಿಲರ್ ಅವರು ಆರೋಪಿಗಳು “ಉನ್ನತ ಮಟ್ಟದ ಸಂಪರ್ಕಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದರು ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಯಾರೂ ನನ್ನ ಪರವಾಗಿ ನಿಲ್ಲಲ್ಲಿ. ಪೊಲೀಸರು ನಮ್ಮವರಲ್ಲ. ವ್ಯವಸ್ಥೆಯು ನಮ್ಮದಲ್ಲ. ಇಲ್ಲಿ ನನ್ನದೇನೂ ಅಲ್ಲ” ಎಂದು ಡೆತ್ ನೋಟಿನಲ್ಲಿ ಇವು ಕೊನೆ ಮಾತುಗಳು ಎಂದು ನರ್ಸ್ ಬರೆದಿದ್ದಾರೆ

ಈ ಘಟನೆಯು ಪ್ರದೇಶದಲ್ಲಿ ಆಕ್ರೋಶದ ಪ್ರತಿಭಟನೆಗಳಿಗೆ ಕಾರಣವಾಗಿದೆ. ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನಾಕಾರರು ಜಮಾಯಿಸಿ ಭದ್ವಾಸಿಯಾ ರಸ್ತೆಯನ್ನು ತಡೆದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು SHO ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಸಂತ್ರಸ್ತ ನರ್ಸ್ ನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಪ್ರತಿಭಟನೆಗಳು ಮತ್ತು ಸಾರ್ವಜನಿಕರ ಆಕ್ರೋಶದ ನಂತರ, ಪೊಲೀಸರು ಈಗ ನಾಲ್ವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...