Homeಮುಖಪುಟಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

- Advertisement -
- Advertisement -

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ ಪುತ್ರರಾದ ರಾಜೇಂದ್ರ ಅಲಿಯಾಸ್ ರಾಜ್ ಮತ್ತು ವಿಕಾಸ್ ಅಲಿಯಾಸ್ ವಿಕ್ಕಿ ಅವರು ನರ್ಸ್ ಮತ್ತು ಅವರ ಮನೆಯವರಿಗೆ ಜಾತಿ ಹಿಡಿದು ಹೀಯಾಳಿಸುತ್ತಾ ಅವರ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ದಾಳಿಯ ಸಮಯದಲ್ಲಿ ನರ್ಸ್ ಮತ್ತು ಆಕೆಯ ತಾಯಿ ಮತ್ತು ಕಿರಿಯ ಸಹೋದರನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ.

ದಾಳಿಕೋರರು ಸಂತ್ರಸ್ತೆಯ ಎದೆ ಮತ್ತು ಮುಖದ ಮೇಲೆ ಗೀಚಿ, ಅವಳನ್ನು ಅವಮಾನಿಸಿ, ಅವಳ ಜಾತಿ ಗುರುತನ್ನು ಗುರಿಯಾಗಿಸಿಕೊಂಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಆತ್ಮಹತ್ಯೆ ಸ್ಥಳದಲ್ಲಿ ದೊರೆತ ಡೆತ್ ನೋಟ್ ನಲ್ಲಿ ಅವರು ಆರೋಪಿಗಳನ್ನು ಸ್ಪಷ್ಟವಾಗಿ ಹೆಸರಿಸಿದ್ದಾರೆ ಮತ್ತು ಹಲ್ಲೆಯು ಜಾತಿ ಪ್ರೇರಿತವಾಗಿ ಎಂದು ವಿವರಿಸಿದ್ದಾರೆ. “ಅವರು ನನ್ನ ಎದೆಗೆ ಪರಚಿ, ನನ್ನ ಘನತೆಗೆ ಘಾಸಿಯನ್ನುಂಟು ಮಾಡಿದರು. ಜಾತಿ ತಾರತಮ್ಯ ಮತ್ತು  ಕೊಳಕು ಮನಸ್ಥಿತಿಯಿಂದ ತುಂಬಿದ ಈ ಜನರ ಮಧ್ಯೆ ನನ್ನ ಜೀವನವನ್ನು ಸಾಗಿಸಲು ಬಯಸುವುದಿಲ್ಲ” ಎಂದು ಟಿಪ್ಪಣಿಯಲ್ಲಿ ಬರೆಯಲಾಗಿದೆ.

ಪತ್ರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಸಹ ತೋರಿಸಿದೆ. ಮಾತಾ ಕಾ ಥಾನ್ ಪೊಲೀಸ್ ಠಾಣೆಯಲ್ಲಿ ಒಂಬತ್ತು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದೆವು ಎಂದು ಕುಟುಂಬ ಹೇಳಿದೆ. ಆದರೆ ಆರೋಪಿಗಳ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾತ್ರ ದಾಖಲಿಸಲಾಗಿದೆ, ನಂತರ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ಭನ್ವರ್ ಸಿಂಗ್ ಜಖಡ್ ಮತ್ತು ಸ್ಥಳೀಯ ಕೌನ್ಸಿಲರ್ ಜಾನಿ ದೇವಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. “ಅವರಿಗೆ ಏನೂ ಆಗುವುದಿಲ್ಲ” ಎಂದು SHO ಹೇಳಿದ್ದರು ಎಂದು ನರ್ಸ್ ಆರೋಪಿಸಿದ್ದಾರೆ ಮತ್ತು ಕೌನ್ಸಿಲರ್ ಅವರು ಆರೋಪಿಗಳು “ಉನ್ನತ ಮಟ್ಟದ ಸಂಪರ್ಕಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದರು ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಯಾರೂ ನನ್ನ ಪರವಾಗಿ ನಿಲ್ಲಲ್ಲಿ. ಪೊಲೀಸರು ನಮ್ಮವರಲ್ಲ. ವ್ಯವಸ್ಥೆಯು ನಮ್ಮದಲ್ಲ. ಇಲ್ಲಿ ನನ್ನದೇನೂ ಅಲ್ಲ” ಎಂದು ಡೆತ್ ನೋಟಿನಲ್ಲಿ ಇವು ಕೊನೆ ಮಾತುಗಳು ಎಂದು ನರ್ಸ್ ಬರೆದಿದ್ದಾರೆ

ಈ ಘಟನೆಯು ಪ್ರದೇಶದಲ್ಲಿ ಆಕ್ರೋಶದ ಪ್ರತಿಭಟನೆಗಳಿಗೆ ಕಾರಣವಾಗಿದೆ. ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನಾಕಾರರು ಜಮಾಯಿಸಿ ಭದ್ವಾಸಿಯಾ ರಸ್ತೆಯನ್ನು ತಡೆದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು SHO ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಸಂತ್ರಸ್ತ ನರ್ಸ್ ನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಪ್ರತಿಭಟನೆಗಳು ಮತ್ತು ಸಾರ್ವಜನಿಕರ ಆಕ್ರೋಶದ ನಂತರ, ಪೊಲೀಸರು ಈಗ ನಾಲ್ವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...