Homeಅಂತರಾಷ್ಟ್ರೀಯಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ - ಯಾರಿವರು? ; ಸಂಕ್ಷಿಪ್ತ ಪರಿಚಯ

ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಮತ ಎಣಿಕೆ ಮುಗಿದು, ಇಡೀ ವಿಶ್ವವೆ ಮುಂದಿನ ಅಧ್ಯಕ್ಷ ಯಾರು ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ. ಈ ಹಿಂದೆ ಅಮೆರಿಕ ಉಪಾಧ್ಯಕ್ಷರಾಗಿದ್ದ ಡೆಮಾಕ್ರಟಿಕ್ ಪಕ್ಷದ ’ಜೋ ಬಿಡೆನ್’ ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪರಿಚಯ ನಾನುಗೌರಿ.ಕಾಮ್ ಓದುಗರಿಗಾಗಿ ಇಲ್ಲಿದೆ.

ಜೋಸೆಫ್ ರಾಬಿನೆಟ್ ಬಿಡೆನ್ ಜೂನಿಯರ್(Joseph Robinette Biden Jr) ಎಂಬ ಹೆಸರಿನ 77 ವರ್ಷದ “ಜೋ ಬಿಡೆನ್” ಎಂದು ಕರೆಯಲ್ಪಡುವ ಇವರು ಅಮೆರಿಕದ ಪೆನ್ಸಿಲ್ವೇನಿಯಾ ರಾಜ್ಯದ ಸ್ಕ್ರಾಂಟನ್‌ನಲ್ಲಿ ನವೆಂಬರ್ 20, 1942 ಜನಿಸಿದರು. ತಮ್ಮ ನಾಲ್ಕು ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಮೊಮ್ಮಕ್ಕಳನ್ನು ಹೊಂದಿದ್ದಾರೆ. ಪ್ರಸ್ತುತ ಅಮೆರಿಕದ ವಿಲ್ಮಿಂಗ್ಟನ್ ರಾಜ್ಯದ ಡೆಲವೇರ್‌ನಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು 

10 ನೇ ವಯಸ್ಸಿನಲ್ಲಿ ಬಿಡೆನ್ (1953) (PC: Buzzfeed)

1972 ರಲ್ಲಿ ಡೆಲವೇರ್‌ನಿಂದ ಮೊದಲ ಬಾರಿ ಸೆನೆಟರ್ ಆಗಿ ಆಯ್ಕೆಯಾಗಿದ್ದ ಇವರು, ಇದುವರೆಗೂ ಆರು ಭಾರಿ ಸೆನೆಟರ್‌ ಆಗಿ ಚುನಾಯಿತರಾಗಿದ್ದಾರೆ. ಬರಾಕ್ ಒಬಾಮ ಅಧ್ಯಕ್ಷರಾಗಿದ್ದ ಕಾಲದಲ್ಲಿ 47 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಡೆಮಾಕ್ರಟಿಕ್ ಪಕ್ಷದಿಂದ 1988 ಮತ್ತು 2008 ರಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನವನ್ನೂ ಕೋರಿದ್ದರು.

ಸುಮಾರು ಅರ್ಧ ಶತಮಾನದಿಂದ ಸಾರ್ವಜನಿಕ ಜೀವನದಲ್ಲಿರುವ ಬಿಡೆನ್ ತಮ್ಮ ಸರ್ಕಾರದ ಅನುಭವವನ್ನು ಒತ್ತಿಹೇಳುತ್ತಾ, ಅಪಾಯಕಾರಿ ಮತ್ತು ಅನಿಶ್ಚಿತ ಜಗತ್ತಿನಲ್ಲಿ ಸ್ಥಿರವಾಗಿ, ಪರಿಭ್ರಮಿತ ವ್ಯಕ್ತಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

22 ನೇ ವಯಸ್ಸಿನಲ್ಲಿ ಬಿಡೆನ್  PC: Wiki

ಕೊರೊನಾ ವೈರಸ್ ಬಿಕ್ಕಟ್ಟು ಪ್ರಾರಂಭವಾಗುತ್ತಿದ್ದಂತೆ, ಮತದಾರರನ್ನು ಸೆಳೆಯಲು ಆರೋಗ್ಯ ರಕ್ಷಣೆ ಮತ್ತು ಅರ್ಥಶಾಸ್ತ್ರ ತಜ್ಞರ ಸಲಹೆಯಂತೆ ಹಲವು ಶಿಫಾರಸುಗಳನ್ನು ರೂಪಿಸಿದ್ದರು. ಕೊರೊನಾ ವೈರಸ್ ಪರೀಕ್ಷೆಗಳನ್ನು ಇನ್ನೂ ಹಚ್ಚು ಮಾಡುವುದು ಮತ್ತು ಉಚಿತಗೊಳಿಸಿವುದು, ರೋಗಿಗಳಿಗೆ ಲಸಿಕೆಯನ್ನು ಕೂಡಾ ಉಚಿತವಾಗಿ ನೀಡುವುದು ಕೂಡಾ ಇವರ ಶಿಫಾರಸ್ಸಿನಲ್ಲಿದೆ. ಅಷ್ಟೇ ಅಲ್ಲದೆ ಮಾಜಿ ಅಧ್ಯಕ್ಷ ಟ್ರಂಪ್ ಕೊರೊನಾ ವೈರಸ್ ಅನ್ನು ನಿರ್ವಹಿಸಿದ್ದನ್ನು ತೀವ್ರವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಜೋ ಬಿಡೆನ್ ”ಆರೈಕೆ ಕಾಯ್ದೆ”ಯ ಅಂಗೀಕಾರದ ಸಮಯದಲ್ಲಿ ಒಬಾಮಾ ಆಡಳಿತದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮತ್ತು ಆರೋಗ್ಯ ರಕ್ಷಣೆ ತನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದರು. ಇದು ಅವರ ಕುಟುಂಬದ ವೈಯಕ್ತಿಕ ದುರಂತಗಳನ್ನು ನೆನಪಿ ಹೇಳುವ, ಚರ್ಚಿಸುವ ಮಾತಾಗಿದ್ದು, 1972 ರಲ್ಲಿ ನಡೆದ ಕಾರು ಅಪಘಾತವೊಂದರಲ್ಲಿ ತಮ್ಮ ಮೊದಲ ಹೆಂಡತಿ ಮತ್ತು ಮಗಳನ್ನು ಕಳೆದುಕೊಂಡಿದ್ದರು ಮತ್ತು 2015 ರಲ್ಲಿ ಅವರ ಮಗ ಬ್ಯೂ ಬಿಡೆನ್ ಮೆದುಳಿನ ಕ್ಯಾನ್ಸರ್‌‌ನಿಂದ ನಿಧನರಾದ್ದರು. ಹಾಗಾಗಿಯೆ ಆರೋಗ್ಯ ರಕ್ಷಣೆಯನ್ನು ಅವರು “ವೈಯಕ್ತಿಕ ಆದ್ಯತೆ” ಎನ್ನುತ್ತಾರೆ.

ತನ್ನ ಎರಡನೇ ಪತ್ನಿ ಜಿಲ್ ಅವರೊಂದಿಗೆ, PC: Azcentral

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಬೆಳಗಾವಿ ಮೂಲದ ಶ್ರೀ ಥಾಣೇದಾರ್‌ ’ಪ್ರತಿನಿಧಿ ಸಭೆ’ಗೆ ಆಯ್ಕೆ

ಅಮೆರಿಕ ಸೆನೆಟ್‌ನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿಡೆನ್, ದ್ವಿಪಕ್ಷೀಯತೆ ಮೌಲ್ಯವನ್ನು ತಾನು ದೃಡವಾಗಿ ನಂಬುತ್ತೇನೆ ಎನ್ನುತ್ತಾರೆ. ತಮ್ಮ ಪ್ರತಿಸ್ಫರ್ಧಿ ರಿಪಬ್ಲಿಕನ್‌ ಪಕ್ಷದವರೊಂದಿಗೂ ಸಮಾಲೋಚನೆ ಮಾಡುತ್ತಾರೆ ಮತ್ತು ಅವರ ಅಭಿಪ್ರಾಯಗಳನ್ನು ಕೇಳುತ್ತಾರೆ.

77 ಹರೆಯದ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ರೊನಾಲ್ಡ್ ರೇಗನ್ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದರು. 1989 ರಲ್ಲಿ ರೇಗನ್ ಅಧಿಕಾರ ತೊರೆದಾಗ ಅವರಿಗೆ 77 ವರ್ಷವಾಗಿತ್ತು. ಇಷ್ಟೇ ಅಲ್ಲದೆ ಜೋ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತೀ ಹೆಚ್ಚು ಮತಗಳನ್ನು ಪಡೆದ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮೆ ಅವರ ಹೆಸರಲ್ಲಿತ್ತು. ಕಳೆದ 100 ವರ್ಷಗಳಲ್ಲಿ ಅತಿಹೆಚ್ಚು ಮತದಾನದ ಪ್ರಮಾಣ ಅಮೆರಿಕಾ ಈ ಬಾರಿ ಕಂಡಿದೆ.

ತಮ್ಮ ಕುಟುಂಬದೊಂದಿಗೆ ಜೋ ಬಿಡೆನ್ (PC: Twitter Via Bloomberg)

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...