Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...