Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...