Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...