Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...