Homeಅಂತರಾಷ್ಟ್ರೀಯಜೋ ಬೈಡೆನ್‌ ಗೆಲುವು ಸ್ಪಷ್ಟ: ಟ್ರಂಪ್‌ಗೆ ಕಮಲಾ ಹ್ಯಾರಿಸ್ ತಿರುಗೇಟು!

ಜೋ ಬೈಡೆನ್‌ ಗೆಲುವು ಸ್ಪಷ್ಟ: ಟ್ರಂಪ್‌ಗೆ ಕಮಲಾ ಹ್ಯಾರಿಸ್ ತಿರುಗೇಟು!

ಅಮೆರಿಕಾದ ಇತಿಹಾಸದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಮತಗಳನ್ನು ಗಳಿಸಿ ನಾವು ಚುನಾವಣೆಯನ್ನು ನಿರ್ಣಾಯಕವಾಗಿ ಗೆದ್ದಿದ್ದೇವೆ- ಕಮಲಾ ಹ್ಯಾರಿಸ್

- Advertisement -
- Advertisement -

ಅಮೆರಿಕಾ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಗೆಲುವನ್ನು ಒಪ್ಪಿಕೊಳ್ಳದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ “ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ” ಎಂದು ಹೊಸ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಮಲಾ ಹ್ಯಾರಿಸ್, ಜೋ ಬೈಡೆನ್ ಸ್ಪಷ್ಟ, ಅವರು ಗೆಲುವು ಸಾಧಿಸಿದ್ದಾರೆ ಎಂದಿದ್ದಾರೆ.

ಮತ ಎಣಿಕೆಯಲ್ಲಿ ಜೋ ಬೈಡೆನ್‌ ಮುನ್ನಡೆ ಪಡೆದುಕೊಂಡ ದಿನದಿಂದಲೂ ಡೋನಾಲ್ಡ್ ಟ್ರಂಪ್ ತಮ್ಮದೇ ಗೆಲುವು ಎಂದು ಟ್ವೀಟ್‌ ಮಾಡುತ್ತಿದ್ದರು. ತಮ್ಮ ಟ್ವೀಟ್‌ಗಳಲ್ಲಿ ತಮಗೆ “ದೊಡ್ಡ ಗೆಲುವು” ಎಂದು ಹೇಳಿಕೊಳ್ಳುತ್ತಾ, ಡೆಮಾಕ್ರಟಿಕ್ ಪಕ್ಷದ ವಿರುದ್ಧ ವಂಚನೆಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಟ್ರಂಪ್‌ ಟ್ವೀಟ್‌ಗಳಿಒಗೆ ತಿರುಗೇಟು ನೀಡುವಂತೆ ಟ್ವೀಟ್ ಮಾಡಿರುವ ಕಮಲಾ ಹ್ಯಾರಿಸ್‌, ’ಅಮೆರಿಕದವರು ಜೋ ಬೈಡೆನ್ ಅವರನ್ನು ಆಯ್ಕೆ ಮಾಡಿರುವುದು ಸ್ಪಷ್ಟ. ಜೋ ಬೈಡೆನ್‌ಗೆ ದಕ್ಕಿದ ಪ್ರತಿ ಮತವೂ ಕೂಡ ಆರೋಗ್ಯ ರಕ್ಷಣೆಯ ಹಕ್ಕಾಗಿದ್ದು, ಅದು ಸವಲತ್ತಲ್ಲ ಎಂಬುದನ್ನು ತೋರಿಸುತ್ತಿದೆ. ಅಮೆರಿಕಾದ ಇತಿಹಾಸದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಮತಗಳನ್ನು ಗಳಿಸಿ ನಾವು ಚುನಾವಣೆಯನ್ನು ನಿರ್ಣಾಯಕವಾಗಿ ಗೆದ್ದಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಇತ್ತ ಟ್ರಂಪ್ ಮತ್ತಷ್ಟು ಟ್ವಿಟ್‌ಗಳನ್ನು ಮಾಡುತ್ತಲೇ ಇದ್ದಾರೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಟ್ರಂಪ್, “ಈ ಜಟಿಲ ಚುನಾವಣೆಯನ್ನು ಜನರು ಸ್ವೀಕರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಚುನಾವಣೆ ಫಲಿತಾಂಶದಿಂದಲೂ ಇದೇ ರೀತಿಯ ಆರೋಪಗಳನ್ನು ಮಾಡುತ್ತಾ ಡೋನಾಲ್ಡ್ ಟ್ರಂಪ್ ಸುಮಾರು 30 ಟ್ವೀಟ್‌ಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಸುಮಾರು 13 ಟ್ವೀಟ್‌ಗಳನ್ನು ಟ್ವಿಟರ್‌ ಕಂಪನಿ ಈಗಾಗಲೇ ನಿರ್ಬಂಧಿಸಿದೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್‌ ಅವರು 7.64 ಕೋಟಿ ಮತಗಳನ್ನು ಪಡೆದಿದ್ದಾರೆ. ಇವು ಟ್ರಂಪ್‌ಗಿಂತ 4 ಮಿಲಿಯನ್ ಹೆಚ್ಚು ಅಂತರದ ಮತಗಳಾಗಿವೆ.  ಈವರೆಗೆ 538 ಎಲೆಕ್ಟೋರ್‌ ಮತಗಳ ಪೈಕಿ 279 ಎಲೆಕ್ಟೋರ್‌ ಮತಗಳನ್ನು ಪಡೆದಿದ್ದಾರೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...