Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...