Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...