Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...