Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...