Homeಮುಖಪುಟಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚಲು ಜೋ ಬೈಡನ್ ಆದೇಶ- ತನಿಖೆ ಚುರುಕುಗೊಳಿಸಿದ ಅಮೆರಿಕಾ

ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚಲು ಜೋ ಬೈಡನ್ ಆದೇಶ- ತನಿಖೆ ಚುರುಕುಗೊಳಿಸಿದ ಅಮೆರಿಕಾ

ಈ ವೈರಸ್‌ನ ಸೃಷ್ಟಿ ಎಲ್ಲಿ, ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಅಮೆರಿಕಾದ ಪ್ರಯತ್ನಕ್ಕೆ ಸಹಕಾರ ನೀಡಬೇಕು ಎಂದು ಚೀನಾವನ್ನು ಬೈಡನ್ ಆಗ್ರಹಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕವು ಅರ್ಧದಷ್ಟು ದೇಶಗಳನ್ನು ತೀವ್ರವಾದ ಸಂಕಷ್ಟಕ್ಕೆ ಸಿಲುಕಿಸಿದೆ. ಕೋವಿಡ್ ವೈದ್ಯಕೀಯ ವಿಪತ್ತಿನಿಂದ ಜಗತ್ತಿನ ಅರ್ಧದಷ್ಟು ಜನ ತಮ್ಮ ಜೀವ ಕೈಯಲ್ಲಿ ಹಿಡಿದು ಜೀವಿಸುತ್ತಿದ್ದಾರೆ. ಅಮೆರಿಕಾ, ಯುರೋಪ್, ಚೀನಾ, ಭಾರತ ಸೇರಿ ಜಗತ್ತಿನ ಎಲ್ಲ ಆರ್ಥಿಕ ಕ್ಷೇತ್ರಗಳು ಮತ್ತೆ ಚೇತರಿಸಿಕೊಳ್ಳಲಾದ ಸ್ಥಿತಿಗೆ ತಲುಪಿವೆ. ಉತ್ಪಾದನಾ ವಲಯ ಕಳೆದ ನೂರು ವರ್ಷಗಳಲ್ಲೆ ಅತ್ಯಂತ ಕನಿಷ್ಠಮಟ್ಟಕ್ಕೆ ಇಳಿದಿದೆ. ನಿರುದ್ಯೋಗ ಮತ್ತು ಹಸಿವೆ ಕೊರೊನಾ ನೀಡಿದ ಬಳುವಳಿಯಾಗಿ ಜನರ ಬಳಿ ಉಳಿದಿದೆ. ಜಗತ್ತಿನ ಜನರ ಜೀವದ ಜೊತೆ ಚೆಲ್ಲಾಟವಾಡುತ್ತ ಅಲೆಯ ಮೇಲೆ ಮತ್ತೊಂದು ಅಲೆಯಾಗಿ ಇನ್ನಷ್ಟು ತೀವ್ರ ಸ್ವರೂಪ ಪಡೆದು ಮುನ್ನುಗ್ಗುತ್ತಿರುವ ವೈರಾಣುವಿನ ಮೂಲ ಯಾವುದು..? ವೈದ್ಯ ವಿಜ್ಞಾನದ ಅತ್ಯಂತ ಕಠಿಣ ಸವಾಲಾಗಿರುವ ಈ ಪ್ರಶ್ನೆಯ ಉತ್ತರ ಮಾತ್ರ ಇದುವರೆಗೆ ದೊರೆತಿಲ್ಲ. ನಾನಾ ಸಿದ್ಧಾಂತಗಳು, ಸಂಶೋಧನೆಗಳು ಒಂದಕ್ಕಿಂತ ಒಂದು ನಿಗೂಢ ಮತ್ತು ಸ್ವಾರಸ್ಯಕರ ಊಹೆ ಮತ್ತು ಆಧಾರಗಳನ್ನು ಹೊರತು ಪಡಿಸಿದರೆ ಸೋಂಕಿನ ಮೂಲದ ಕುರಿತಾಗಿ ಅಧಿಕೃತ ಉತ್ತರವನ್ನು ನೀಡಲು ವೈದ್ಯ ಜಗತ್ತು ಇಂದಿಗೂ ತಡಕಾಡುತ್ತಿದೆ.

ಕಳೆದ ವರ್ಷ 2020 ರ ಹೊತ್ತಿನಲ್ಲಿ ಟ್ರಂಪ ನೇತೃತ್ವದ ಅಮೆರಿಕ ಸರ್ಕಾರ ಕೊರೊನಾ ವೈರಸ್ ಅನ್ನು ಚೈನೀಸ್ ವೈರಸ್ ಎಂದು ಕರೆಯುವ ಮೂಲಕ ವೈರಸ್ಸಿನ ಮೂಲವನ್ನು ತನ್ನ ಪ್ರತಿಸ್ಪರ್ಧಿ ಚೀನಾದ ಕಡೆ ತಿರುಗಿಸಿತ್ತು. ಚೀನಾ ಉತ್ತರವಾಗಿ ಅಮೆರಿಕಾದಲ್ಲೆ ವೈರಸ್ ಸೃಷ್ಟಿಯಾಗಿದೆ ಎಂಬ ಪ್ರತಿ ತಂತ್ರವನ್ನು ವ್ಯಾಪಕ ಪ್ರಚಾರ ಮಾಡಿತು. ಇವೆರಡು ದೇಶಗಳ ವ್ಯಾಪಕ ಪ್ರಚಾರ ಅಪಪ್ರಚಾರಗಳ ಅಂತ್ಯದಲ್ಲಿ ಜಗತ್ತನ್ನು ಕಾಡುತ್ತಿರುವ ಪ್ರಶ್ನೆಗೆ ಸಿಕ್ಕ ಉತ್ತರಗಳು ಊಹೆ ಮತ್ತು ಊಹೆ ಅಷ್ಟೆ.

ವಿಶ್ವ ಆರೋಗ್ಯ ಸಂಸ್ಥೆಯು ಚೀನಾವನ್ನಾಗಲಿ, ಅಮೆರಿಕಾವನ್ನಾಗಲಿ ಅಥವಾ ಜಗತ್ತಿನ ಇನ್ನಾವುದೇ‌ ದೇಶವನ್ನು ಕೊರೊನಾ ಸೋಂಕಿನ ಮೂಲವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಧಿಕೃತ ಪಡಿಸಿತ್ತು. WHO ಸ್ಪಷ್ಟನೆಯ ನಂತರ ಯಾವ ದೇಶಗಳೂ ಕೊರೋನಾ ವೈರಸ್ ನ ಮೂಲವನ್ನು ಹುಡುಕುವ ಸಾಹಸಕ್ಕೆ ಮುಂದಾಗಿರಲಿಲ್ಲ. ಎಲ್ಲರ ಗಮನ ಸೋಂಕಿನ ನಿಯಂತ್ರಣ ಮತ್ತು ಲಸಿಕೆಯನ್ನು ಕಂಡು ಹಿಡಿಯುವುದರ ಕಡೆ ತಿರುಗಿತು. ಅಮೆರಿಕಾ ಮಾತ್ರ ಸದ್ದಿಲ್ಲದೇ ತನ್ನದೇ ರೀತಿಯಲ್ಲಿ ಗೌಪ್ಯವಾಗಿ ಸೋಂಕಿನ ಮೂಲವನ್ನು ಪತ್ತೆ ಹಚ್ಚುವ ತನಿಖೆಯನ್ನು ಮುಂದುವರೆಸಿತ್ತು. ಕುಂಟುತ್ತ ಸಾಗುತ್ತಿದ್ದ ಕೊರೋನಾ ಮೂಲದ ರಹಸ್ಯ ತನಿಖೆಗೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಚುರುಕು ನೀಡುವ ಮೂಲಕ ಈಗ ಮತ್ತೊಮ್ಮೆ ಸೋಂಕಿನ ಮೂಲದ ಚರ್ಚೆಗೆ ನಾಂದಿ ಹಾಡಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

ಕೊರೊನಾ ತನಿಖೆ ತೀವ್ರಗೊಳಿಸಲು ಆದೇಶಿದ ಪ್ರೆಸಿಡೆಂಟ್ ಬೈಡನ್ ಹೇಳಿದ್ದೇನು ?
ನೋವಲ್ ಕೊರೊನಾ ವೈರಸ್ SARS-CoV2 ನಿಂದ ಸಂಭವಿಸುವ ಕೋವಿಡ್ ಎಂದು ಕರೆಯಲ್ಪಡುವ ಕೊರೊನಾ ವೈರಸ್ ಡಿಸೀಸ್ ಮೂಲ ಪತ್ತೆ ಹಚ್ಚಲು ಅಮೆರಿಕಾ ಯಾವಾಗಲೂ ಬದ್ದವಾಗಿದೆ. ಜಗತ್ತಿನ ಆರೋಗ್ಯ ವ್ಯವಸ್ಥೆಗೆ ದೊಡ್ಡ ಪಿಡುಗಾಗಿ ಪರಿಣಮಿಸಿರುವ ಸಾಂಕ್ರಾಮಿಕದ ಮೂಲವನ್ನು ಪತ್ತೆ ಹಚ್ಚಿ ವೈರಸ್ ಮಾನವ ನಿರ್ಮಿತವೇ ಅಥವಾ ಪ್ರಕೃತಿಯ ಜೀವ ರಾಸಾಯನಿಕ ಕ್ರಿಯೆಗಳ ಮೂಲಕ ಹುಟ್ಟಿಕೊಂಡಿದ್ದೆ ಎಂದು ಕಂಡುಕೊಳ್ಳುವುದು 21 ನೇ ಶತಮಾನದ ಮಹತ್ವದ ಸಂಶೋಧನೆಗಳಲ್ಲಿ ಒಂದಾಗಿದೆ. ಅಮೆರಿಕಾದ ತನಿಖೆ ಈ ನಿಟ್ಟಿನಲ್ಲಿಯೇ ಮುಂದುವರೆಯಲಿದ್ದು ಚೀನಾ ಕೂಡ ಅಮೆರಿಕಾದ ತನಿಖೆಯಲ್ಲಿ ಭಾಗವಹಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಬೈಡನ್ ಬುಧವಾರ (ಮೇ 26) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೀನಾದ ವುಹಾನ್ ನಗರದ ಜೀವ ರಾಸಾಯನಿಕ ಪ್ರಯೋಗವೊಂದರಲ್ಲಿ ಕೊರೊನಾ ವೈರಸ್ ಸೃಷ್ಟಿಯಾಗಿದೆ ಎಂಬ ಬಲವಾದ ಆಯಾಮವೂ ನಮ್ಮ ಮುಂದಿದೆ. ವೂಹಾನ್ ಲ್ಯಾಬ್ ಆಯಾಮದಲ್ಲೂ ಅಮೆರಿಕನ್ ತನಿಖಾ ಏಜೆನ್ಸಿಗಳು ಸಂಶೋಧನೆಯನ್ನು ಮುಂದುವರೆಸಲಿವೆ ಎಂದು ಅಧ್ಯಕ್ಷ ಬೈಡನ್ ತಿಳಿಸಿದ್ದಾರೆ.
ಮುಂದಿನ 90 ದಿನಗಳಲ್ಲಿ ತನಿಖೆಗೆ ಪೂರಕವಾದ ಮಾಹಿತಿ ಸಾಕ್ಷಿಗಳನ್ನು ಕಲೆಹಾಕಿ ಒಂದು ಅಂತಿಮವಾದ ಅಧಿಕೃತ ತೀರ್ಮಾನಕ್ಕೆ ಬರುವಂತೆ ಬೈಡನ್ ತಮ್ಮ ತನಿಖಾ ಸಂಸ್ಥೆಗಳಿಗೆ ಆದೇಶಿಸಿದ್ದಾರೆ.

ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಕೊರೊನಾ ಸಾಂಕ್ರಾಮಿಕ ವೈರಸ್ 2019 ಅಂತ್ಯದ ವೇಳೆಗೆ ಮೊಟ್ಟ ಮೊದಲ ಬಾರಿಗೆ ಚೀನಾ ದೇಶದ ವುಹಾನ್ ನಗರದಲ್ಲಿ ಪತ್ತೆಯಾಯಿತು. 2019 ರಿಂದ ಸರಿ ಸುಮಾರು 10 ಕೋಟಿ ಜನರಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಆಧುನಿಕ ವಿಜ್ಞಾನಕ್ಕೆ ವಿರುದ್ಧವಾಗಿರುವ ಅನೇಕ ವೈರಸ್ ಸಿದ್ಧಾಂತಗಳ ಪ್ರತಿಪಾದನೆಯ ನಂತರವೂ ಇಂದಿಗೂ ಅಮೆರಿಕ ಮತ್ತು ಅದನ್ನು ಬೆಂಬಲಿಸುವ ರಾಷ್ಟ್ರಗಳು ವೈರಸ್ ಕುರಿತಾಗಿ ಪಾರದರ್ಶಕವಾಗಿ ಚೀನಾ ವರ್ತಿಸಿದ್ದರೆ ಇಂದಿನ ಮಹಾ ದುರಂತವನ್ನು ತಪ್ಪಿಸಬಹುದಿತ್ತೆಂಬ ಅಭಿಪ್ರಾಯವನ್ನೇ ಹೊಂದಿದ್ದಾರೆ.

ಚೀನಾದ ಮೇಲೆ ನಾನಾ ರೀತಿಯ ಒತ್ತಡದ ಮೂಲಕ ಮಾಹಿತಿಯನ್ನು ಕಲೆಹಾಕಲು ಯತ್ನಿಸುತ್ತಿದ್ದಾರೆ. ಚೀನಾ ವೈರಸ್ ಮಹಾ ಪಿಡುಗು ಪ್ರಕೃತಿ ಜನ್ಯ ಎಂದು ಹೇಳುವ ತನ್ನ ವಾದವನ್ನು ಮುಂದುವರೆಸಿದೆ. ಅಮೆರಿಕ ಹೊರತಪಡಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ(WHO) ಮತ್ತು ಬೇರೆ ಬೇರೆ ದೇಶಗಳ ವಿಜ್ಞಾನಿಗಳು ಬಹು ಆಯಾಮದಲ್ಲಿ ಸೋಂಕಿನ ಮೂಲವನ್ನು ಪತ್ತೆಹಚ್ಚುವ ಸಂಶೋಧನೆಯನಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ರಿಪಬ್ಲಿಕನ್ ಪಕ್ಷ ಕೊರೊನಾ ವೈರಸ್ಸಿನ ಮೂಲ ವುಹಾನ್ ನಗರದ ಪ್ರಯೋಗಾಲಯವೇ ಎಂಬ ತೀರ್ಮಾನಕ್ಕೆ ಬಂದಿತ್ತು.‌ ಜೋ ಬೈಡನ್, ಟ್ರಂಪ್ ಮಾದರಿಯಲ್ಲಿ ಯಾವುದೇ ಅವಸರದ ತೀರ್ಮಾನಕ್ಕೆ ಬಾರದೇ ತಮ್ಮ‌ ತನಿಖಾ ಸಂಸ್ಥೆಗಳ ವರದಿಗಾಗಿ ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ. ಜಗತ್ತಿನಲ್ಲಿ ಹೊಸ ಚರ್ಚೆಗಳನ್ನು ಹುಟ್ಟು ಹಾಕುವಂತೆ ಅಮೆರಿಕ ಮೂಲದ ಜಗತ್ತಿನ ಪ್ರಸಿದ್ಧ ಸುದ್ಧಿ ಸಂಸ್ಥೆ ‘ವಾಲ್ ಸ್ಟ್ರೀಟ್ ಜರ್ನಲ್’ ಕೆಲವು ದಿನಗಳ ಹಿಂದೆ ವರದಿಯೊಂದನ್ನು ಪ್ರಕಟಿಸಿತು. ‘ವಾಲ್ ಸ್ಟ್ರೀಟ್ ಜರ್ನಲ್’ ತನ್ನ ವರದಿಯಲ್ಲಿ ಅಮೆರಿಕಾ ತನಿಖಾ ಸಂಸ್ಥೆಯು ಕೆಲ ಅಂಶಗಳನ್ನು ಹೊರಹಾಕಿದೆ.

2019, ನವೆಂಬರ್ ಅಂದರೆ ಕೊರೊನಾ ವೈರಸ್ ವುಹಾನ್ ನಗರದಲ್ಲಿ ಕಾಣಿಸಿಕೊಳ್ಳುವ ಸರಿ ಸುಮಾರು ಒಂದು ತಿಂಗಳ ಮೊದಲು ವುಹಾನ್ ನಗರದ ಪ್ರಯೋಗಾಲಯದಲ್ಲಿ ಮೂವರು ಸಂಶೋಧಕರಲ್ಲಿ ಕೊರೊನಾ ವೈರಸ್ ಸೋಂಕಿನಂತಹದೇ ರೋಗ ಲಕ್ಷಣಗಳು ಕಂಡು ಬಂದಿತ್ತು.‌ ಸಂಶೋಧಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂಬ ಸ್ಫೋಟಕ ವಿಷಯಗಳನ್ನು ಪ್ರಕಟಿಸಿದೆ. ವಾಲ್ ಸ್ಟ್ರೀಟ್ ವರದಿ ಪ್ರಕಟವಾದ ಬೆನ್ನಲ್ಲೇ ಜಗತ್ತಿನಾದ್ಯಂತ ಜನರು ವೈರಸ್ ನ ಮೂಲದ ಕುರಿತಾಗಿ ಚೀನಾದ ವುಹಾನ್ ಲ್ಯಾಬ್ ಕಡೆಗೆ ಬೆರಳು ತೋರಿಸ ತೊಡಗಿದ್ದಾರೆ. ವಾಲ್ ಸ್ಟ್ರೀಟ್ ವರದಿಯ ಬೆನ್ನಲ್ಲೇ ಅಧ್ಯಕ್ಷ ಬೈಡನ್ ಕೊರೊನಾ ವೈರಸ್ ತನಿಖೆಯನ್ನು ಶೀರ್ಘವಾಗಿ ಪೂರ್ಣಗೊಳಿಸಲು ಆದೇಶಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಅಮೆರಿಕಾದ ಬಹುಪಾಲು ತನಿಖಾ ಸಂಸ್ಥೆಗಳು ಚೀನಾದ ವುಹಾನ್ ನಗರದಲ್ಲಿ ನಡೆದ ಎರಡು ಘಟನೆಗಳ ಕಡೆ ವೈರಸ್ ನ ಮೂಲವನ್ನು ಶಂಕಿಸಿದ್ದಾರೆ. ವೈರಸ್ ಮೂಲ ಪತ್ತೆ ಕಾರ್ಯದಲ್ಲಿ ತೊಡಗಿರುವ ಅಮೆರಿಕಾದ 18 ತನಿಖಾ ಸಂಸ್ಥೆಗಳಲ್ಲಿ 2 ತನಿಖಾ ಸಂಸ್ಥೆಗಳು ವುಹಾನ್ ನಗರದ ಪ್ರಾಣಿ ಮಾರುಕಟ್ಟೆಯ ಮೂಲಕ ಮನುಷ್ಯನಿಗೆ ಕೊರೊನಾ ತಗುಲಿದೆ ಎಂದು ಅಭಿಪ್ರಾಯಪಡುತ್ತಿವೆ. ಇನ್ನುಳಿದ ತನಿಖಾ ಸಂಸ್ಥೆಗಳ ಅಭಿಪ್ರಾಯ ವುಹಾನ್ ಲ್ಯಾಬೊರೇಟರಿಯ ಕಡೆ ವಾಲುತ್ತದೆ. ಬಲವಾಗಿ ನಂಬಬಹುದಾದ 2019 ರ ಅಂತ್ಯದ ವೇಳೆಗೆ ವುಹಾನ್ ನಗರದಲ್ಲಿ‌ ನಡೆದ ಎರಡು ಘಟನೆಗಳಲ್ಲಿ ಯಾವುದು ಅಂತಿಮ ಎಂದು ಸಮರ್ಥವಾಗಿ ಸಾಬೀತು ಪಡಿಸುವ ನಿರ್ಣಾಯಕ ಪುರಾವೆಗಳು ಇದುವರೆಗೆ ದೊರೆತಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ತಮ್ಮ ತನಿಖಾ ಸಂಸ್ಥೆಗಳ ಇದುವರೆಗಿನ ಸಂಶೋಧನೆಯ ಬೆಳವಣಿಗೆ ಕುರಿತು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ದೇಶದ ರಾಷ್ಟ್ರೀಯ ಪ್ರಯೋಗಾಲಯಗಳು ತನಿಖಾ ಸಂಸ್ಥೆಗಳೊಂದಿಗೆ ಒಗ್ಗೂಡಿ ಕೊರೊನಾ ಸಾಂಕ್ರಾಮಿಕದ ಮೂಲವನ್ನು ಪತ್ತೆಹಚ್ಚಲು ನೆರವಾಗುವಂತೆ ಬೈಡನ್  ಮನವಿಯನ್ನು ಮಾಡಿದ್ದಾರೆ. ಇದೇ ವೇಳೆ ಅವರು ಅಂತರಾಷ್ಟ್ರೀಯ ಪಿಡುಗಿನ ಸೃಷ್ಟಿ ಎಲ್ಲಿ ಹೇಗೆ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳುವ ಅಮೆರಿಕಾದ ಪ್ರಯತ್ನಕ್ಕೆ ಸಹಕಾರ ನೀಡಬೇಕು ಎಂದು ಚೀನಾವನ್ನು ಆಗ್ರಹಿಸಿದ್ದಾರೆ. ತನಿಖಾ ಸಂಸ್ಥೆಗಳು ಕಾಲ ಕಾಲಕ್ಕೆ ಅಮೆರಿಕಾ ಸಂಸತ್ತಿನ ಮುಂದೆ ತನಿಖೆಯ ಬೆಳವಣಿಗೆಗಳ ವರದಿ ನೀಡಬೇಕೆಂದು ಇದೇ ವೇಳೆ ಅಧ್ಯಕ್ಷ ಬೈಡನ್ ಆದೇಶಿಸಿದರು.

ಇದೇ ವೇಳೆ ಅಧ್ಯಕ್ಷ ಬೈಡನ್, ಅಮೆರಿಕಾ, ನೋವಲ್ ಕೊರೊನಾ ವೈರಸ್  ಮೂಲವನ್ನು ಪತ್ತೆಹಚ್ಚಲು ಜಗತ್ತಿನ ಎಲ್ಲಾ ಸಮಾನ ಮನಸ್ಕ ಶಕ್ತಿಗಳೊಂದಿಗೆ ಕಾರ್ಯ ನಿರ್ವಹಿಸಲು ಬಯಸುತ್ತದೆ. ಜಗತ್ತಿನ ಇತರ ಶಕ್ತಿಗಳು ಪಾರದರ್ಶಕ, ಸಾಕ್ಷಿ ಆಧಾರಿತ, ಪೂರ್ಣ ಪ್ರಮಾಣದ ತನಿಖೆಯಲ್ಲಿ ಭಾಗವಹಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು ಅಂತರಾಷ್ಟ್ರೀಯ ಸಮುದಾಯದಲ್ಲಿ ಮನವಿ ಮಾಡಿದ್ಧಾರೆ.

ಅಮೆರಿಕ ಅಧ್ಯಕ್ಷ ಬೈಡನ್ ಹೇಳಿಕೆಗೆ ಚೀನಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಮೆರಿಕಾದಲ್ಲಿರುವ ಚೀನಾ ರಾಯಭಾರ ಕಚೇರಿಯು ಜಗತ್ತಿನ ರಾಜಕೀಯ ಶಕ್ತಿಗಳು ಮತ್ತೊಮ್ಮೆ ಪರಸ್ಪರ ಕೆಸರೆರಚಾಟಕ್ಕೆ‌‌, ಆರೋಪ ಪ್ರತ್ಯಾರೋಪಕ್ಕೆ ಮುಂದಾಗಿರುವುದು ದುರದೃಷ್ಟಕರ. ಸದ್ಯದ ತುರ್ತು ಪರಿಸ್ಥಿತಿಯ ನಿರ್ವಹಣೆಯ ಕಡೆ ಗಮನ ಹರಿಸಬೇಕಾದ ಸಂದರ್ಭದಲ್ಲಿ ಅದೇ ಹಳಸಲು ಪ್ರಯೋಗಾಲಯದ ಕಥೆಗಳಿಗೆ ಜೀವಕೊಡುವುದರಲ್ಲಿ ಯಾವುದೇ ಸದುದ್ಧೇಶ ಕಂಡುಬರುವುದಿಲ್ಲ ಎಂದು ಎಂಬಸಿಯ ಅಧಿಕೃತ ವೆಬ್ ಸೈಟ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

2021 ರ ಆರಂಭದ ವೇಳೆಗೆ ವಿಶ್ವ ಆರೋಗ್ಯ ಸಂಸ್ಥೆ (WHO) ನೇತೃತ್ವದ ಕೊರೊನಾ ವೈರಸ್ ಮೂಲದ ಕುರಿತು ಸತ್ಯ ಶೋಧನಾ ಸಮಿತಿಯೊಂದು ಚೀನಾದಲ್ಲಿ ಅಗತ್ಯ ಮಾಹಿತಿಗಳನ್ನು ಕಲೆಹಾಕಲು ಮುಂದಾಯಿತು. WHO ನೇತೃತ್ವದ ಸಮಿತಿಯ ತನಿಖೆಗೆ ತನ್ನ ನೆಲದಲ್ಲಿ ಅವಕಾಶ ನೀಡಲು ಚೀನಾ ನಿರಾಕರಿಸಿತ್ತಲೇ ಬಂದಿದೆ. ಜಗತ್ತಿನ ಇತರ ವಿಜ್ಞಾನಿಗಳು, ವೈದ್ಯರು ಮತ್ತು ಸಂಶೋಧಕರನ್ನು ಕೊರೊನಾ ವೈರಸ್ ಕುರಿತಾದ ಸಂಶೋಧಕರಿಗೆ ಚೀನಾ ಗಡಿಯೊಳಗೆ ಪ್ರವೇಶಿಸದಂತೆ ತಡೆಯುತ್ತಲೇ ಬಂದಿದೆ. ಚೀನಾದ ಈ ಪ್ರತಿರೋಧ ಮತ್ತು ವೈರಸ್ ಮೂಲದ ಕುರಿತು ಗೌಪ್ಯತೆಯನ್ನು ಕಾಯ್ದುಕೊಳ್ಳುವ ತಂತ್ರದ ಫಲವಾಗಿ ವೈರಸ್‌ನ ಮೂಲ ಪತ್ತೆ ಮಾಡುವ ಜಗತ್ತಿನ ಮಹತ್ವದ ಸಂಶೋಧನೆಗೆ ಹಿನ್ನಡೆಯಾಗಿದೆ.

ಜೋ ಬೈಡನ್ ಮಾಧ್ಯಮಗೋಷ್ಢಿಯನ್ನುದ್ಧೇಶಿಸಿ ಕೊರೊನಾ ಸಾಂಕ್ರಾಮಿಕವು ಹರಡುವ ಆರಂಭದ ದಿನಗಳಲ್ಲಿ ಸಂಶೋಧಕರು ಮತ್ತು ತನಿಖಾ ಸಂಸ್ಥೆಗಳು ಕಾರ್ಯಗತರಾಗದೇ ಇದ್ದುದರಿಂದ ಇಂದು ನಮ್ಮ ಬಳಿ
ವೈರಸ್‌ನ ಮೂಲವನ್ನು ಕರಾರುವಾಕ್ಕಾಗಿ ನಿರ್ಣಾಯಿಸುವ ಸಾಕ್ಷ್ಯಾಧಾರಗಳು ಇಲ್ಲ. ಇರುವ ಸಾಕ್ಷ್ಯಾಧಾರಗಳ ವಿಶ್ಲೇಷಣೆ ಮತ್ತು ಹೆಚ್ಚಿನ ಅಧ್ಯಯನಗಳ ಮೂಲಕ ಒಂದು ನಿರ್ಣಯಕ್ಕೆ ಬರುವ ಹಂತದಲ್ಲಿದ್ದೇವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ವಾಲ್ ಸ್ಟ್ರೀಟ್ ಜರ್ನಲ್ ನ ವುಹಾನ್ ಲ್ಯಾಬ್ ವರದಿ ಮತ್ತು ಅಧ್ಯಕ್ಷ ಬೈಡನ್ ಸುದ್ದಿಗೋಷ್ಠಿಯ ಬೆನ್ನಲ್ಲೇ ಜಾಗತಿಕ ಸಾಮಾಜಿಕ ಜಾಲತಾಣ ಸಂಸ್ಥೆ ಕೊರೊನಾ ವೈರಸ್ ಮನುಷ್ಯ ನಿರ್ಮಿತ ಎಂದು ಹೇಳುವ ಯಾವ ಪೋಸ್ಟ್ ಗಳನ್ನು ಇನ್ನುಮುಂದೆ ನಿಷೇಧಿಸುವುದಿಲ್ಲ. ಕೊರೊನಾ ವೈರಸ್ ಮುನಷ್ಯ ನಿರ್ಮಿತವೆಂಬ ವಾದಕ್ಕೆ ಇದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಫೇಸ್‌ಬುಕ್‌ ಸಂಸ್ಥೆ ಹೇಳಿದೆ. ಇತ್ತೀಚಿನ ಬೆಳವಣಿಗಳು, ತನಿಖೆಗಳು ಮತ್ತು ವಿಜ್ಞಾನಿಗಳ-ತಜ್ಞರ ಜೊತೆಗಿನ ಸಮಾಲೋಚನೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಫೇಸ್‌ಬುಕ್‌ ಪ್ರಕಟಿಸಿದೆ.

ಜಗತ್ತಿನಾದ್ಯಂತ ಹಾಹಾಕರವೆಬ್ಬಿಸಿರುವ ಕೊರೊನಾ ಸಾಂಕ್ರಾಮಿಕ ಪ್ರಕೃತಿಕವೋ ಅಥವಾ ಮಾನವ ನಿರ್ಮಿತವೋ ತಿಳಿಯದು. ಒಂದು ವೇಳೆ ವೈರಸ್ ಮನುಷ್ಯ ನಿರ್ಮಿತವಾಗಿದ್ದರೆ ಜಗತ್ತಿನಾದ್ಯಂತ ಲಕ್ಷಾಂತರ ಜನರ ಸಾವು ನೋವುಗಳ ಸಾವಿಗೆ ಕಾರಣವಾದ ಮೂಲವನ್ನು , ಶಕ್ತಿಗಳನ್ನು ಮನುಕುಲ ಕ್ಷಮಿಸುವುದಿಲ್ಲ. ವೈರಸ್ ಪ್ರಾಕೃತಿ ಜನ್ಯವಾಗಿದ್ದರೆ ಅದರ ಹೊಣೆಗಾರಿಕೆಯನ್ನು ಯಾವುದೇ ಒಂದು ದೇಶದ ಮೇಲೆ ಹೊರಿಸುವುದು ಅಪರಾಧ. ಅಮೆರಿಕಾ ನಡೆಸುತ್ತಿರುವ ತನಿಖೆ ಎಷ್ಟು ಪಾರದರ್ಶಕ ಮತ್ತು ವೈಜ್ಞಾನಿಕವಾಗಿರಲಿದೆ ಎಂಬುದು ಕೆಲವು ದಿನಗಳಲ್ಲಿ ಜಗತ್ತಿಗೆ ತಿಳಿಯುತ್ತದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ವಿಜ್ಞಾನಿಗಳ ಸಮೂಹ ಅಮೆರಿಕಾದ ತನಿಖಾ ವರದಿಯನ್ನು ಒಪ್ಪಿ ಅನುಮೋದಿಸಿದಲ್ಲಿ ಮಾತ್ರ ಅಮೆರಿಕಾ ಬಲವಾಗಿ ಪ್ರಚಾರಪಡಿಸುತ್ತಿರುವ ‘ವುಹಾನ್ ಲ್ಯಾಬ್’ ಸಿದ್ಧಾಂತವನ್ನು ಒಪ್ಪಬಹುದು. 2019ರ ಡಿಸೆಂಬರ್ ವೇಳೆಗೆ ಆರಂಭವಾದ ಕೊರೊನಾ ಸಾಂಕ್ರಾಮಿಕದ ಪಿಡುಗು ಇಂದು ಎರಡನೇ ಅಲೆಯಾಗಿ ಜಗತ್ತಿನಾದ್ಯಂತ ದುರಂತವನ್ನು ಸೃಷ್ಟಿಸುತ್ತಿರುವ ವೇಳೆ ವೈರಸ್‌ನ ಮೂಲದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜಾಗತಿಕ ಶಕ್ತಿಗಳು ವೈರಸ್ ನಿಯಂತ್ರಣಕ್ಕೆ ಒತ್ತು ನೀಡುತ್ತಾರೆ ವೈರಸ್ ಮೂಲ ಪತ್ತೆ ಹಚ್ಚಲು ಮುಂದಾಗುತ್ತಾರೋ ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಬಹುದು.

ಮೂಲ : ದಿ ಗಾರ್ಡಿಯನ್
ಅನುವಾದ : ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...