Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

ಬೈಡೆನ್ ಗೆಲುವು ಸಾಧಿಸಿರುವ ವಿಸ್ಕಾನ್ಸಿನ್‌ನಲ್ಲಿ ಮರು ಮತ ಏಣಿಕೆಗೆ ಟ್ರಂಪ್ ಒತ್ತಾಯಿಸಿದ್ದಾರೆ.

- Advertisement -
- Advertisement -

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ 2016ರ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಜಯಗಳಿಸಿದ್ದ ಒಂದೊಂದೇ ರಾಜ್ಯಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಜೋ ಬೈಡೆನ್ ಅವರ ಗೆಲುವಿಗೆ ಟ್ರಂಪ್ ಕಳೆದ ಭಾರಿ ಜಯಗಳಿಸಿದ್ದ ಮಿಚಿಗನ್ ಕೂಡ ಸೇರುವ ನಿರೀಕ್ಷೆಯಿದೆ.

ಇತ್ತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ಮತ್ತು ಮಿಚಿಗನ್‌ನಲ್ಲಿ ಮತ ಎಣಿಕೆಯನ್ನು ನಿಲ್ಲಿಸಿ, ಅಧ್ಯಕ್ಷೀಯ ಚುನಾವಣೆಯ ಅಂತಿಮ ಫಲಿತಾಂಶಗಳನ್ನು ತಡೆಯುವ ಬೆದರಿಕೆ ಹಾಕಿದ್ದಾರೆ. ಬೈಡೆನ್ ಗೆಲುವು ಸಾಧಿಸಿರುವ ವಿಸ್ಕಾನ್ಸಿನ್‌ನಲ್ಲಿ ಮರು ಮತ ಏಣಿಕೆಗೆ ಟ್ರಂಪ್ ಒತ್ತಾಯಿಸಿದ್ದಾರೆ.

ನಿನ್ನೆ, ಟ್ರಂಪ್ ತಾವು ಜಯಗಳಿಸಿರುವುದಾಗಿ ಅನಧಿಕೃತವಾಗಿ ಘೋಷಿಸಿದರು ಮತ್ತು ಮತ ಎಣಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ಇಲ್ಲಿಯವರೆಗೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ಲೋರಿಡಾ, ಅಲಬಾಮಾ, ಟೆನ್ನೆಸ್ಸೀ, ಒಕ್ಲಾಹೋಮ, ಇಂಡಿಯಾನಾ, ಕೆಂಟುಕಿ, ಪಶ್ಚಿಮ ವರ್ಜೀನಿಯಾ, ಜಾರ್ಜಿಯಾ, ಅಯೋವಾ, ಉತ್ತರ ಕೆರೊಲಿನಾ, ಓಹಿಯೋದಲ್ಲಿ ಮುಂದಿದ್ದಾರೆ.

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ವಿಸ್ಕಾನ್ಸಿನ್, ಪೆನ್ಸಿಲ್ವೇನಿಯಾ, ಕ್ಯಾಲಿಫೋರ್ನಿಯಾ, ಮೈನೆ, ವಾಷಿಂಗ್ಟನ್, ಇಲಿನಾಯ್ಸ್, ಕೋನೆಕ್ಟಿಕಟ್, ಮಿಚಿಗನ್, ಮಿನ್ನೇಸೋಟ, ವೆರ್ಮೊಂಟ್, ರೋಡೆ ಐಲೆಂಡ್, ನ್ಯೂಜೆರ್ಸಿ, ಮೇರಿಲ್ಯಾಂಡ್, ಡೆಲವೇರ್, ನೆವಾಡಾ, ನ್ಯೂ ಹ್ಯಾಮ್‌ಶೈರ್ ಮತ್ತು ವರ್ಜೀನಿಯಾದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ಬ್ಯುಸಿನೆಸ್ ಸ್ಟಾಂಡರ್ಡ್ ವರದಿಯ ಪ್ರಕಾರ ಜೋ ಬೈಡೆನ್ 264 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.


ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...