Homeಅಂತರಾಷ್ಟ್ರೀಯಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌...

ಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌ ಹೇಳಿಕೆ

- Advertisement -
- Advertisement -

ಜಿ 20 ಶೃಂಗಸಭೆ ಸಭೆಯ ವೇಳೆ ಭಾರತದಲ್ಲಿ ಮಾದ್ಯಮಗಳ ಜೊತೆ ಮಾತನಾಡಲು ಅವಕಾಶ ನೀಡದಿರುವುದಕ್ಕೆ ಅಮೆರಿಕಾ ಅಧ್ಯಕ್ಷ  ಜೋ ಬೈಡನ್‌ ಕಳವಳ ವ್ಯಕ್ತಪಡಿಸಿದ್ದು, ಮೋದಿ ಜೊತೆ ಮಾತುಕತೆ ವೇಳೆ ಮಾನವ ಹಕ್ಕುಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿರುವುದಾಗಿ ಹೇಳಿದ್ದಾರೆ.

ಜೋ ಬೈಡನ್‌- ಮೋದಿ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿಯಾಟ್ನಂನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದು, ಭಾರತದಲ್ಲಿ ನಾನು ಮತ್ತು ಪ್ರಧಾನಿ ಮೋದಿ ಜೊತೆ ಮಾತನಾಡುವಾಗ ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದ್ದೇನೆ  ಎಂದು ಹೇಳಿದ್ದಾರೆ.

ನಾನು ಯಾವಾಗಲೂ ಹೇಳುವಂತೆ, ಮೋದಿ ಜೊತೆ ಮಾತನಾಡುವಾಗ ನಾನು ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಹೇಳಿದ್ದೇನೆ. ಸಮೃದ್ಧ ದೇಶವನ್ನು ನಿರ್ಮಿಸುವಲ್ಲಿ ನಾಗರಿಕ ಸಮಾಜ ಮತ್ತು ಮುಕ್ತ ಪತ್ರಿಕಾ ಸ್ವಾತಂತ್ರ್ಯದ ಪಾತ್ರದ ಬಗ್ಗೆ ಮಾತನಾಡಿದ್ದೇನೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಹಂಚಿಕೆಯ ಮೌಲ್ಯಗಳು ಯಶಸ್ಸಿಗೆ ನಿರ್ಣಾಯಕವಾಗಿವೆ ಎಂದು ಬೈಡನ್‌ ಹೇಳಿದ್ದಾರೆ.

ಭಾರತ-ಅಮೆರಿಕ ನಡುವಿನ ಸಂಬಂಧಗಳನ್ನು ಬಲಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಗಳನ್ನು ನಡೆಸಿದ್ದೇನೆ. ಇದು ನಮಗೆ ಜಾಗತಿಕ ನಾಯಕತ್ವವನ್ನು ಪ್ರತಿಪಾದಿಸುವ  ಪ್ರಮುಖ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಇರುವ ಜನರ ಸವಾಲುಗಳನ್ನು ಪರಿಹರಿಸುವಲ್ಲಿ ನಮ್ಮ ಬದ್ಧತೆಯಾಗಿದೆ. ಅಂತರ್ಗತ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೂಡಿಕೆ ಮಾಡುವುದು, ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವುದು, ಆಹಾರ ಭದ್ರತೆ ಮತ್ತು ಶಿಕ್ಷಣವನ್ನು ಬಲಪಡಿಸುವುದಾಗಿದೆ ಎಂದು ಬೈಡನ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಮೋದಿ, ನಾನು ಪತ್ರಿಕಾಗೋಷ್ಟಿ ನಡೆಸುವುದಿಲ್ಲ, ಇನ್ನೊಬ್ಬರಿಗೆ ನಡೆಸಲು ಬಿಡುವುದಿಲ್ಲ ಎನ್ನುವುದು ಪ್ರರಿಣಾಮ ಬೀರಿಲ್ಲ. ಭಾರತದಲ್ಲಿ ಮೋದಿಗೆ ಹೇಳಿದ ಅದೇ ವಿಚಾರವನ್ನು ವಿಯೆಟ್ನಾಂನಲ್ಲಿ ಬೈಡನ್‌ ಬಹಿರಂಗಪಡಿಸಿದ್ದಾರೆ. ಮಾನವ ಹಕ್ಕುಗಳು, ನಾಗರಿಕ ಸಮಾಜದ ಪಾತ್ರ ಮತ್ತು ಮುಕ್ತ ಮಾಧ್ಯಮದ ಪಾತ್ರವನ್ನು ಗೌರವಿಸುವ ಬಗ್ಗೆ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಬೈಡನ್‌ ಭಾಷಣದ ತುಣುಕನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅನುಯಾಯಿಗಳ ಪೇಜ್‌, ಭಾರತದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್‌ಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡಲಿಲ್ಲ, ಆದ್ದರಿಂದ ಅವರು ವಿಯೆಟ್ನಾಂಗೆ ತೆರಳಿ ಶೃಂಗಸಭೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರೊಂದಿಗೆ ಮಾನವ ಹಕ್ಕುಗಳು ಮತ್ತು ಮುಕ್ತ ಪತ್ರಿಕಾ ಕುರಿತು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದೆ.

ಇದನ್ನು ಓದಿ: ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...