Homeಅಂತರಾಷ್ಟ್ರೀಯಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌...

ಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌ ಹೇಳಿಕೆ

- Advertisement -
- Advertisement -

ಜಿ 20 ಶೃಂಗಸಭೆ ಸಭೆಯ ವೇಳೆ ಭಾರತದಲ್ಲಿ ಮಾದ್ಯಮಗಳ ಜೊತೆ ಮಾತನಾಡಲು ಅವಕಾಶ ನೀಡದಿರುವುದಕ್ಕೆ ಅಮೆರಿಕಾ ಅಧ್ಯಕ್ಷ  ಜೋ ಬೈಡನ್‌ ಕಳವಳ ವ್ಯಕ್ತಪಡಿಸಿದ್ದು, ಮೋದಿ ಜೊತೆ ಮಾತುಕತೆ ವೇಳೆ ಮಾನವ ಹಕ್ಕುಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿರುವುದಾಗಿ ಹೇಳಿದ್ದಾರೆ.

ಜೋ ಬೈಡನ್‌- ಮೋದಿ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿಯಾಟ್ನಂನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದು, ಭಾರತದಲ್ಲಿ ನಾನು ಮತ್ತು ಪ್ರಧಾನಿ ಮೋದಿ ಜೊತೆ ಮಾತನಾಡುವಾಗ ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದ್ದೇನೆ  ಎಂದು ಹೇಳಿದ್ದಾರೆ.

ನಾನು ಯಾವಾಗಲೂ ಹೇಳುವಂತೆ, ಮೋದಿ ಜೊತೆ ಮಾತನಾಡುವಾಗ ನಾನು ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಹೇಳಿದ್ದೇನೆ. ಸಮೃದ್ಧ ದೇಶವನ್ನು ನಿರ್ಮಿಸುವಲ್ಲಿ ನಾಗರಿಕ ಸಮಾಜ ಮತ್ತು ಮುಕ್ತ ಪತ್ರಿಕಾ ಸ್ವಾತಂತ್ರ್ಯದ ಪಾತ್ರದ ಬಗ್ಗೆ ಮಾತನಾಡಿದ್ದೇನೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಹಂಚಿಕೆಯ ಮೌಲ್ಯಗಳು ಯಶಸ್ಸಿಗೆ ನಿರ್ಣಾಯಕವಾಗಿವೆ ಎಂದು ಬೈಡನ್‌ ಹೇಳಿದ್ದಾರೆ.

ಭಾರತ-ಅಮೆರಿಕ ನಡುವಿನ ಸಂಬಂಧಗಳನ್ನು ಬಲಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಗಳನ್ನು ನಡೆಸಿದ್ದೇನೆ. ಇದು ನಮಗೆ ಜಾಗತಿಕ ನಾಯಕತ್ವವನ್ನು ಪ್ರತಿಪಾದಿಸುವ  ಪ್ರಮುಖ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಇರುವ ಜನರ ಸವಾಲುಗಳನ್ನು ಪರಿಹರಿಸುವಲ್ಲಿ ನಮ್ಮ ಬದ್ಧತೆಯಾಗಿದೆ. ಅಂತರ್ಗತ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೂಡಿಕೆ ಮಾಡುವುದು, ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವುದು, ಆಹಾರ ಭದ್ರತೆ ಮತ್ತು ಶಿಕ್ಷಣವನ್ನು ಬಲಪಡಿಸುವುದಾಗಿದೆ ಎಂದು ಬೈಡನ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಮೋದಿ, ನಾನು ಪತ್ರಿಕಾಗೋಷ್ಟಿ ನಡೆಸುವುದಿಲ್ಲ, ಇನ್ನೊಬ್ಬರಿಗೆ ನಡೆಸಲು ಬಿಡುವುದಿಲ್ಲ ಎನ್ನುವುದು ಪ್ರರಿಣಾಮ ಬೀರಿಲ್ಲ. ಭಾರತದಲ್ಲಿ ಮೋದಿಗೆ ಹೇಳಿದ ಅದೇ ವಿಚಾರವನ್ನು ವಿಯೆಟ್ನಾಂನಲ್ಲಿ ಬೈಡನ್‌ ಬಹಿರಂಗಪಡಿಸಿದ್ದಾರೆ. ಮಾನವ ಹಕ್ಕುಗಳು, ನಾಗರಿಕ ಸಮಾಜದ ಪಾತ್ರ ಮತ್ತು ಮುಕ್ತ ಮಾಧ್ಯಮದ ಪಾತ್ರವನ್ನು ಗೌರವಿಸುವ ಬಗ್ಗೆ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಬೈಡನ್‌ ಭಾಷಣದ ತುಣುಕನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅನುಯಾಯಿಗಳ ಪೇಜ್‌, ಭಾರತದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್‌ಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡಲಿಲ್ಲ, ಆದ್ದರಿಂದ ಅವರು ವಿಯೆಟ್ನಾಂಗೆ ತೆರಳಿ ಶೃಂಗಸಭೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರೊಂದಿಗೆ ಮಾನವ ಹಕ್ಕುಗಳು ಮತ್ತು ಮುಕ್ತ ಪತ್ರಿಕಾ ಕುರಿತು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದೆ.

ಇದನ್ನು ಓದಿ: ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...