ಜಿ 20 ಶೃಂಗಸಭೆ ಸಭೆಯ ವೇಳೆ ಭಾರತದಲ್ಲಿ ಮಾದ್ಯಮಗಳ ಜೊತೆ ಮಾತನಾಡಲು ಅವಕಾಶ ನೀಡದಿರುವುದಕ್ಕೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕಳವಳ ವ್ಯಕ್ತಪಡಿಸಿದ್ದು, ಮೋದಿ ಜೊತೆ ಮಾತುಕತೆ ವೇಳೆ ಮಾನವ ಹಕ್ಕುಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿರುವುದಾಗಿ ಹೇಳಿದ್ದಾರೆ.
ಜೋ ಬೈಡನ್- ಮೋದಿ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿಯಾಟ್ನಂನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದು, ಭಾರತದಲ್ಲಿ ನಾನು ಮತ್ತು ಪ್ರಧಾನಿ ಮೋದಿ ಜೊತೆ ಮಾತನಾಡುವಾಗ ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದ್ದೇನೆ ಎಂದು ಹೇಳಿದ್ದಾರೆ.
ನಾನು ಯಾವಾಗಲೂ ಹೇಳುವಂತೆ, ಮೋದಿ ಜೊತೆ ಮಾತನಾಡುವಾಗ ನಾನು ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಹೇಳಿದ್ದೇನೆ. ಸಮೃದ್ಧ ದೇಶವನ್ನು ನಿರ್ಮಿಸುವಲ್ಲಿ ನಾಗರಿಕ ಸಮಾಜ ಮತ್ತು ಮುಕ್ತ ಪತ್ರಿಕಾ ಸ್ವಾತಂತ್ರ್ಯದ ಪಾತ್ರದ ಬಗ್ಗೆ ಮಾತನಾಡಿದ್ದೇನೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಹಂಚಿಕೆಯ ಮೌಲ್ಯಗಳು ಯಶಸ್ಸಿಗೆ ನಿರ್ಣಾಯಕವಾಗಿವೆ ಎಂದು ಬೈಡನ್ ಹೇಳಿದ್ದಾರೆ.
ಭಾರತ-ಅಮೆರಿಕ ನಡುವಿನ ಸಂಬಂಧಗಳನ್ನು ಬಲಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಗಳನ್ನು ನಡೆಸಿದ್ದೇನೆ. ಇದು ನಮಗೆ ಜಾಗತಿಕ ನಾಯಕತ್ವವನ್ನು ಪ್ರತಿಪಾದಿಸುವ ಪ್ರಮುಖ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಇರುವ ಜನರ ಸವಾಲುಗಳನ್ನು ಪರಿಹರಿಸುವಲ್ಲಿ ನಮ್ಮ ಬದ್ಧತೆಯಾಗಿದೆ. ಅಂತರ್ಗತ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೂಡಿಕೆ ಮಾಡುವುದು, ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವುದು, ಆಹಾರ ಭದ್ರತೆ ಮತ್ತು ಶಿಕ್ಷಣವನ್ನು ಬಲಪಡಿಸುವುದಾಗಿದೆ ಎಂದು ಬೈಡನ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ, ನಾನು ಪತ್ರಿಕಾಗೋಷ್ಟಿ ನಡೆಸುವುದಿಲ್ಲ, ಇನ್ನೊಬ್ಬರಿಗೆ ನಡೆಸಲು ಬಿಡುವುದಿಲ್ಲ ಎನ್ನುವುದು ಪ್ರರಿಣಾಮ ಬೀರಿಲ್ಲ. ಭಾರತದಲ್ಲಿ ಮೋದಿಗೆ ಹೇಳಿದ ಅದೇ ವಿಚಾರವನ್ನು ವಿಯೆಟ್ನಾಂನಲ್ಲಿ ಬೈಡನ್ ಬಹಿರಂಗಪಡಿಸಿದ್ದಾರೆ. ಮಾನವ ಹಕ್ಕುಗಳು, ನಾಗರಿಕ ಸಮಾಜದ ಪಾತ್ರ ಮತ್ತು ಮುಕ್ತ ಮಾಧ್ಯಮದ ಪಾತ್ರವನ್ನು ಗೌರವಿಸುವ ಬಗ್ಗೆ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಬೈಡನ್ ಭಾಷಣದ ತುಣುಕನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅನುಯಾಯಿಗಳ ಪೇಜ್, ಭಾರತದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡಲಿಲ್ಲ, ಆದ್ದರಿಂದ ಅವರು ವಿಯೆಟ್ನಾಂಗೆ ತೆರಳಿ ಶೃಂಗಸಭೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರೊಂದಿಗೆ ಮಾನವ ಹಕ್ಕುಗಳು ಮತ್ತು ಮುಕ್ತ ಪತ್ರಿಕಾ ಕುರಿತು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದೆ.
Mr. Modi saying to Mr. Biden — “Na Press Conference karoonga,
Na karne doonga” has had no impact.Mr. Biden is saying the same things in Vietnam which he said to Mr. Modi’s face in India — on respecting human rights, the role of civil society and free press. pic.twitter.com/08WthcKdUC
— Jairam Ramesh (@Jairam_Ramesh) September 10, 2023
ಇದನ್ನು ಓದಿ: ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ