Homeಮುಖಪುಟಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

- Advertisement -
- Advertisement -

ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ನಡೆದ ಭಾರತದ ಪ್ರಧಾನಿ ಮೋದಿಯೊಂದಿಗಿನ ದ್ವಿಪಕ್ಷೀಯ ಸಭೆಯ ನಂತರ ಮಾಧ್ಯಮಗಳಿಗೆ ಜೋ ಬೈಡನ್‌ ಮತ್ತು ಪ್ರಧಾನಿ ಮೋದಿಗೆ ಪ್ರಶ್ನೆಗಳನ್ನು ಕೇಳಲು ಭಾರತವು ಅವಕಾಶ ನೀಡಿಲ್ಲ ಎಂದು ಅಮೆರಿಕಾದ ಅಧ್ಯಕ್ಷರಾದ ಜೋ ಬೈಡನ್‌ ತಂಡ ಹೇಳಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇಂದು ಮತ್ತು ನಾಳೆ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಾದ ಅಧ್ಯಕ್ಷ ಜೋ ಬೈಡನ್‌ ನಿನ್ನೆ ದೆಹಲಿಗೆ ಆಗಮಿಸಿದ್ದಾರೆ.

ದ್ವಿಪಕ್ಷೀಯ ಸಭೆಯ ಬಳಿಕ ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರಿಗೆ ಪ್ರಶ್ನೆಗಳನ್ನು ಕೇಳಲು ಹಲವು ಬಾರಿ ಮನವಿ ಮಾಡಿಕೊಂಡರೂ ಮಾಧ್ಯಮಗಳಿಗೆ ಅವಕಾಶ ನೀಡಿಲ್ಲ. ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರ ದ್ವಿಪಕ್ಷೀಯ ಸಭೆಗೆ  ಮಾಧ್ಯಮ ಪ್ರವೇಶಕ್ಕಾಗಿ ಯುಎಸ್ ಮಾಡಿದ ವಿನಂತಿಗಳನ್ನು ಭಾರತ ತಿರಸ್ಕರಿಸಿದೆ ಎಂದು ಅಧ್ಯಕ್ಷ ಜೋ ಬೈಡನ್‌ ಅವರ ತಂಡವು ಹೇಳಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌(ಟ್ವಿಟರ್‌)ನಲ್ಲಿ ಬರೆದುಕೊಂಡಿದ್ದಾರೆ.

ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷರು ವಿದೇಶಿ ನಾಯಕರಿಗೆ ಆತಿಥ್ಯ ನೀಡುವಾಗ ಸಾಮಾನ್ಯವಾದ ವ್ಯವಸ್ಥೆಯಾದ ಪತ್ರಿಕಾಗೋಷ್ಟಿಗೆ ಅವಕಾಶ ನೀಡುತ್ತಾರೆ. ಆದರೆ ಭಾರತ ಇದಕ್ಕೆ ಅವಕಾಶ ನಿರಾಕರಿಸಿದೆ ಎಂದು ಶ್ವೇತಭವನ ಹೇಳಿದೆ.

2014ರಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಮೋದಿಯವರು ಮಾದ್ಯಮದಿಂದ ದೂರ ಸರಿದಿರುವ ಬಗ್ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾಗಿದ್ದಾರೆ. ಕೆಲ ಸಂದರ್ಶನಗಳನ್ನು ಹೊರತುಪಡಿಸಿದರೆ ಅವರು ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ ಎಂದು ಅವರ ಮೇಲೆ ಟೀಕೆಗಳಿವೆ.

ಭಾರತವು ಜಿ20 ಶೃಂಗ ಸಭೆಯನ್ನು ಆಯೋಜಿಸುತ್ತಿದೆ ಮತ್ತು ಅದಕ್ಕೆ ಬೇಕಿದ್ದ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಪತ್ರಿಕಾಗೋಷ್ಟಿ ಪ್ರೋಟೋಕಾಲ್‌ನ ಭಾಗವಾಗಿಲ್ಲ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲಪ್ರದೇಶ: ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಐಐಟಿ ನಿರ್ದೇಶಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...