Homeಮುಖಪುಟಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

- Advertisement -
- Advertisement -

ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ನಡೆದ ಭಾರತದ ಪ್ರಧಾನಿ ಮೋದಿಯೊಂದಿಗಿನ ದ್ವಿಪಕ್ಷೀಯ ಸಭೆಯ ನಂತರ ಮಾಧ್ಯಮಗಳಿಗೆ ಜೋ ಬೈಡನ್‌ ಮತ್ತು ಪ್ರಧಾನಿ ಮೋದಿಗೆ ಪ್ರಶ್ನೆಗಳನ್ನು ಕೇಳಲು ಭಾರತವು ಅವಕಾಶ ನೀಡಿಲ್ಲ ಎಂದು ಅಮೆರಿಕಾದ ಅಧ್ಯಕ್ಷರಾದ ಜೋ ಬೈಡನ್‌ ತಂಡ ಹೇಳಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇಂದು ಮತ್ತು ನಾಳೆ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಾದ ಅಧ್ಯಕ್ಷ ಜೋ ಬೈಡನ್‌ ನಿನ್ನೆ ದೆಹಲಿಗೆ ಆಗಮಿಸಿದ್ದಾರೆ.

ದ್ವಿಪಕ್ಷೀಯ ಸಭೆಯ ಬಳಿಕ ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರಿಗೆ ಪ್ರಶ್ನೆಗಳನ್ನು ಕೇಳಲು ಹಲವು ಬಾರಿ ಮನವಿ ಮಾಡಿಕೊಂಡರೂ ಮಾಧ್ಯಮಗಳಿಗೆ ಅವಕಾಶ ನೀಡಿಲ್ಲ. ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರ ದ್ವಿಪಕ್ಷೀಯ ಸಭೆಗೆ  ಮಾಧ್ಯಮ ಪ್ರವೇಶಕ್ಕಾಗಿ ಯುಎಸ್ ಮಾಡಿದ ವಿನಂತಿಗಳನ್ನು ಭಾರತ ತಿರಸ್ಕರಿಸಿದೆ ಎಂದು ಅಧ್ಯಕ್ಷ ಜೋ ಬೈಡನ್‌ ಅವರ ತಂಡವು ಹೇಳಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌(ಟ್ವಿಟರ್‌)ನಲ್ಲಿ ಬರೆದುಕೊಂಡಿದ್ದಾರೆ.

ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷರು ವಿದೇಶಿ ನಾಯಕರಿಗೆ ಆತಿಥ್ಯ ನೀಡುವಾಗ ಸಾಮಾನ್ಯವಾದ ವ್ಯವಸ್ಥೆಯಾದ ಪತ್ರಿಕಾಗೋಷ್ಟಿಗೆ ಅವಕಾಶ ನೀಡುತ್ತಾರೆ. ಆದರೆ ಭಾರತ ಇದಕ್ಕೆ ಅವಕಾಶ ನಿರಾಕರಿಸಿದೆ ಎಂದು ಶ್ವೇತಭವನ ಹೇಳಿದೆ.

2014ರಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಮೋದಿಯವರು ಮಾದ್ಯಮದಿಂದ ದೂರ ಸರಿದಿರುವ ಬಗ್ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾಗಿದ್ದಾರೆ. ಕೆಲ ಸಂದರ್ಶನಗಳನ್ನು ಹೊರತುಪಡಿಸಿದರೆ ಅವರು ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ ಎಂದು ಅವರ ಮೇಲೆ ಟೀಕೆಗಳಿವೆ.

ಭಾರತವು ಜಿ20 ಶೃಂಗ ಸಭೆಯನ್ನು ಆಯೋಜಿಸುತ್ತಿದೆ ಮತ್ತು ಅದಕ್ಕೆ ಬೇಕಿದ್ದ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಪತ್ರಿಕಾಗೋಷ್ಟಿ ಪ್ರೋಟೋಕಾಲ್‌ನ ಭಾಗವಾಗಿಲ್ಲ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲಪ್ರದೇಶ: ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಐಐಟಿ ನಿರ್ದೇಶಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...