Homeಅಂತರಾಷ್ಟ್ರೀಯಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

- Advertisement -
- Advertisement -

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ ಟ್ರಂಪ್ ಈ ಯುದ್ಧವನ್ನು ಪ್ರಾರಂಭಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಈ ಯುದ್ಧವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಜೋ ಕೆಂಟ್, ಮಂಗಳವಾರ (ಮಾ. 17) ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲ್ಲಿಸಿದ್ದಾರೆ.

ಅಮೆರಿಕದ ಪ್ರಮುಖ ಗುಪ್ತಚರ ಸಂಸ್ಥೆಯ ಮುಖ್ಯಸ್ಥರೊಬ್ಬರು ಯುದ್ಧದ ನೀತಿಯನ್ನು ವಿರೋಧಿಸಿ ಅಧಿಕಾರದಿಂದ ಕೆಳಗಿಳಿದಿರುವುದು ಈಗ ಜಾಗತಿಕ ಚರ್ಚೆಯ ವಿಷಯವಾಗಿದೆ. ಇದು ಡೊನಾಲ್ಡ್ ಟ್ರಂಪ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ ಎಂದು ಕೆಲ ವರದಿಗಳು ಹೇಳಿವೆ.

ಜೋ ಕೆಂಟ್ ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ರಂಪ್ ಅವರನ್ನು ಉದ್ದೇಶಿಸಿ ಬರೆದ ಈ ಪತ್ರದಲ್ಲಿ, ಇರಾನ್ ವಿರುದ್ಧದ ಯುದ್ಧದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ಯುದ್ಧವು ನೈತಿಕವಾಗಿ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ತಪ್ಪು” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇರಾನ್ ಜೊತೆಗಿನ ಯುದ್ದ ನನ್ನ ಆತ್ಮ ಸಾಕ್ಷಿ ಒಪ್ಪುವುದಿಲ್ಲ. ಇರಾನ್‌ನಿಂದ ನಮಗೆ ತಕ್ಷಣಕ್ಕೆ ಯಾವುದೇ ಬೆದರಿಕೆ ಇರಲಿಲ್ಲ. ಇಸ್ರೇಲ್‌ನ ಒತ್ತಡಕ್ಕೆ ಮಣಿದು ಈ ಯುದ್ಧ ಪ್ರಾರಂಭಿಸಲಾಗಿದೆ” ಎಂದಿದ್ದಾರೆ.

ಯಾರು ಈ ಜೋ ಕೆಂಟ್?

ಜೋ ಕೆಂಟ್ (45 ವರ್ಷ) ಅವರು ಈ ಹಿಂದೆ ರಾಜಕೀಯ ಅಭ್ಯರ್ಥಿಯಾಗಿದ್ದವರು ಮತ್ತು ತೀವ್ರ ಬಲಪಂಥೀಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದವರು. ಸೇನೆಯಲ್ಲಿ ‘ಗ್ರೀನ್ ಬೆರೆಟ್’ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅವರು, 2022 ಮತ್ತು 2024ರಲ್ಲಿ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸಿ ಸೋತಿದ್ದರು. ಅವರ ಬಲಪಂಥೀಯ ಒಲವು ಮತ್ತು ಕೆಲವು ವಿವಾದಾತ್ಮಕ ಗುಂಪುಗಳೊಂದಿಗಿನ ಸಂಬಂಧವು ಅವರ ರಾಜಕೀಯ ಜೀವನದಲ್ಲಿ ಸದಾ ಚರ್ಚೆಯ ವಿಷಯವಾಗಿತ್ತು.

ಅಮೆರಿಕ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕರಾಗಿರುವ ಕೆಂಟ್, ಇರಾಕ್ ಯುದ್ಧ ಸೇರಿದಂತೆ ಒಟ್ಟು 11 ಬಾರಿ ಸಕ್ರಿಯ ಯುದ್ಧ ಭೂಮಿಗಳಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 20 ವರ್ಷಗಳ ಕಾಲ ಸೈನ್ಯದಲ್ಲಿದ್ದ ಅವರು ‘ಚೀಫ್ ವಾರಂಟ್ ಆಫೀಸರ್’ ಆಗಿ ನಿವೃತ್ತರಾದರು. ಇರಾಕ್ ಮಾತ್ರವಲ್ಲದೆ ಯೆಮನ್ ಮತ್ತು ಉತ್ತರ ಆಫ್ರಿಕಾದಲ್ಲೂ ಅವರು ಕಾರ್ಯಾಚರಣೆ ನಡೆಸಿದ್ದಾರೆ. ಸೈನ್ಯದಿಂದ ನಿವೃತ್ತರಾದ ನಂತರ, ಅವರು ಸಿಐಎನಲ್ಲಿ ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಕೆಂಟ್ ಅವರ ಮೊದಲ ಪತ್ನಿ ಶಾನನ್ ಕೆಂಟ್ ಅಮೆರಿಕ ನೌಕಾಪಡೆಯ ಕ್ರಿಪ್ಟೋಲಾಜಿಕ್ ಟೆಕ್ನಿಷಿಯನ್ ಆಗಿದ್ದರು. ಅವರು 2019ರಲ್ಲಿ ಸಿರಿಯಾದ ಮನ್ಬಿಜ್‌ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು. 

ಶಾನನ್ ಅವರು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದರು. ಈ ಘಟನೆಯು ಜೋ ಕೆಂಟ್ ಅವರ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ್ದು, ಅವರು ಇರಾನ್ ವಿರುದ್ಧದ ಯುದ್ಧವನ್ನು ವಿರೋಧಿಸಿ ರಾಜೀನಾಮೆ ನೀಡಲು ಒಂದು ಮುಖ್ಯ ಕಾರಣ ಎನ್ನಲಾಗ್ತಿದೆ.

ಸೇನೆಯಿಂದ ಹೊರಬಂದ ನಂತರ, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಕೆಂಟ್ ಕೇಂದ್ರ ಗುಪ್ತಚರ ಸಂಸ್ಥೆಯಲ್ಲಿ (ಸಿಐಎ) ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 20 ವರ್ಷಗಳ ಕಾಲ ಸೈನ್ಯದಲ್ಲಿ ‘ಗ್ರೀನ್ ಬೆರೆಟ್’ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಅವರು, ಸಿಐಎನಲ್ಲಿನ ತಮ್ಮ ವೃತ್ತಿಜೀವನದ ನಂತರ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟರು.

ಕಾಂಗ್ರೆಸ್‌ನಲ್ಲಿ ನೈಋತ್ಯ ವಾಷಿಂಗ್ಟನ್ ರಾಜ್ಯವನ್ನು ಪ್ರತಿನಿಧಿಸಲು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಎರಡು ಬಾರಿ ಕೆಂಟ್ ಪ್ರಚಾರ ನಡೆಸಿದ್ದರು. ಆದರೆ 2022 ಮತ್ತು 2024 ಎರಡೂ ಬಾರಿಯೂ ಅವರು ಸೆಂಟ್ರಿಸ್ಟ್ ಡೆಮೋಕ್ರಾಟ್ ಅಭ್ಯರ್ಥಿ ಮೇರಿ ಗ್ಲುಸೆನ್‌ಕ್ಯಾಂಪ್ ಪೆರೆಜ್ ವಿರುದ್ಧ ಸೋಲನುಭವಿಸಿದರು.

ಜೋ ಕೆಂಟ್ ಅವರು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದಾಗಲೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲ ಗಳಿಸಿದ್ದರು. ಆದಾಗ್ಯೂ, ಅವರು ಹಲವು ವಿವಾದಗಳಿಗೆ ಸಿಲುಕಿದ್ದರು. ವಿಶೇಷವಾಗಿ, ತೀವ್ರ ಬಲಪಂಥೀಯ ಗುಂಪಾದ ‘ಪ್ರೌಡ್ ಬಾಯ್ಸ್’ ಸದಸ್ಯರೊಬ್ಬರಿಗೆ ಕನ್ಸಲ್ಟಿಂಗ್ ಫೀಸ್ ಪಾವತಿಸಿದ್ದು ದೊಡ್ಡ ಮಟ್ಟದ ಟೀಕೆಗೆ ಗುರಿಯಾಗಿತ್ತು.

ಕಟ್ಟರ್ ಬಲಪಂಥೀಯ ಜೋ ಕೆಂಟ್

ಜೋ ಕೆಂಟ್ ಅವರನ್ನು ರಾಜಕೀಯ ವಿಶ್ಲೇಷಕರು ಮತ್ತು ವಿರೋಧಿಗಳು ಸಾಮಾನ್ಯವಾಗಿ ‘ಕಟ್ಟರ್ ಬಲಪಂಥೀಯ’ ಎಂದೇ ಗುರುತಿಸುತ್ತಾರೆ.

ಏಕೆಂದರೆ, ಅವರು ಈ ಹಿಂದೆ ‘ಪ್ರೌಡ್ ಬಾಯ್ಸ್’ ನಂತಹ ತೀವ್ರಗಾಮಿ ಬಲಪಂಥೀಯ ಗುಂಪಿನ ಸದಸ್ಯರಿಗೆ ಕನ್ಸಲ್ಟಿಂಗ್ ಶುಲ್ಕ ಪಾವತಿಸಿದ್ದು ದೊಡ್ಡ ವಿವಾದವಾಗಿತ್ತು.

ಕೆಂಟ್ ಅಮೆರಿಕದ ‘MAGA’ (Make America Great Again) ಆಂದೋಲನದ ಪ್ರಬಲ ಬೆಂಬಲಿಗರು. ಅವರ ವಿಚಾರಧಾರೆಗಳು ವಲಸೆ ವಿರೋಧಿ ಮತ್ತು ಅಮೆರಿಕದ ಹಿತಾಸಕ್ತಿಗೆ ಮಾತ್ರ ಒತ್ತು ನೀಡುವ ರಾಷ್ಟ್ರೀಯತೆಯನ್ನು ಒಳಗೊಂಡಿವೆ.

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ವಾದವನ್ನು ಅವರು ಬೆಂಬಲಿಸಿದ್ದರು. ಶ್ವೇತವರ್ಣೀಯ ರಾಷ್ಟ್ರೀಯವಾದಿ ನಿಕ್ ಫ್ಯುಯೆಂಟೆಸ್ ಅವರೊಂದಿಗೆ ಅವರು ನಡೆಸಿದ ಸಂಭಾಷಣೆಯ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಕೆಂಟ್ ಅವರು ತಾವು ಕೇವಲ ‘ಅಮೆರಿಕ ಫಸ್ಟ್’ ನೀತಿಯನ್ನು ಬೆಂಬಲಿಸುವ ರಾಷ್ಟ್ರೀಯವಾದಿ ಎಂದು ಹೇಳಿಕೊಳ್ಳುತ್ತಾರೆ. ಈಗ ಅವರು ಇರಾನ್ ಯುದ್ಧದ ವಿರುದ್ಧ ರಾಜೀನಾಮೆ ನೀಡಿರುವುದು ಅವರ ಬಲಪಂಥೀಯ ನಿಲುವಿನಲ್ಲೇ ಇರುವ ‘ಹೊರದೇಶದ ಯುದ್ಧಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು’ ಎಂಬ ಸಿದ್ಧಾಂತದ ಭಾಗವಾಗಿದೆ ಎಂದು ವರದಿಗಳು ಹೇಳುತ್ತವೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...