Homeಅಂತರಾಷ್ಟ್ರೀಯಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

- Advertisement -
- Advertisement -

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ ಟ್ರಂಪ್ ಈ ಯುದ್ಧವನ್ನು ಪ್ರಾರಂಭಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಈ ಯುದ್ಧವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಜೋ ಕೆಂಟ್, ಮಂಗಳವಾರ (ಮಾ. 17) ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲ್ಲಿಸಿದ್ದಾರೆ.

ಅಮೆರಿಕದ ಪ್ರಮುಖ ಗುಪ್ತಚರ ಸಂಸ್ಥೆಯ ಮುಖ್ಯಸ್ಥರೊಬ್ಬರು ಯುದ್ಧದ ನೀತಿಯನ್ನು ವಿರೋಧಿಸಿ ಅಧಿಕಾರದಿಂದ ಕೆಳಗಿಳಿದಿರುವುದು ಈಗ ಜಾಗತಿಕ ಚರ್ಚೆಯ ವಿಷಯವಾಗಿದೆ. ಇದು ಡೊನಾಲ್ಡ್ ಟ್ರಂಪ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ ಎಂದು ಕೆಲ ವರದಿಗಳು ಹೇಳಿವೆ.

ಜೋ ಕೆಂಟ್ ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ರಂಪ್ ಅವರನ್ನು ಉದ್ದೇಶಿಸಿ ಬರೆದ ಈ ಪತ್ರದಲ್ಲಿ, ಇರಾನ್ ವಿರುದ್ಧದ ಯುದ್ಧದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ಯುದ್ಧವು ನೈತಿಕವಾಗಿ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ತಪ್ಪು” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇರಾನ್ ಜೊತೆಗಿನ ಯುದ್ದ ನನ್ನ ಆತ್ಮ ಸಾಕ್ಷಿ ಒಪ್ಪುವುದಿಲ್ಲ. ಇರಾನ್‌ನಿಂದ ನಮಗೆ ತಕ್ಷಣಕ್ಕೆ ಯಾವುದೇ ಬೆದರಿಕೆ ಇರಲಿಲ್ಲ. ಇಸ್ರೇಲ್‌ನ ಒತ್ತಡಕ್ಕೆ ಮಣಿದು ಈ ಯುದ್ಧ ಪ್ರಾರಂಭಿಸಲಾಗಿದೆ” ಎಂದಿದ್ದಾರೆ.

ಯಾರು ಈ ಜೋ ಕೆಂಟ್?

ಜೋ ಕೆಂಟ್ (45 ವರ್ಷ) ಅವರು ಈ ಹಿಂದೆ ರಾಜಕೀಯ ಅಭ್ಯರ್ಥಿಯಾಗಿದ್ದವರು ಮತ್ತು ತೀವ್ರ ಬಲಪಂಥೀಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದವರು. ಸೇನೆಯಲ್ಲಿ ‘ಗ್ರೀನ್ ಬೆರೆಟ್’ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅವರು, 2022 ಮತ್ತು 2024ರಲ್ಲಿ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸಿ ಸೋತಿದ್ದರು. ಅವರ ಬಲಪಂಥೀಯ ಒಲವು ಮತ್ತು ಕೆಲವು ವಿವಾದಾತ್ಮಕ ಗುಂಪುಗಳೊಂದಿಗಿನ ಸಂಬಂಧವು ಅವರ ರಾಜಕೀಯ ಜೀವನದಲ್ಲಿ ಸದಾ ಚರ್ಚೆಯ ವಿಷಯವಾಗಿತ್ತು.

ಅಮೆರಿಕ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕರಾಗಿರುವ ಕೆಂಟ್, ಇರಾಕ್ ಯುದ್ಧ ಸೇರಿದಂತೆ ಒಟ್ಟು 11 ಬಾರಿ ಸಕ್ರಿಯ ಯುದ್ಧ ಭೂಮಿಗಳಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 20 ವರ್ಷಗಳ ಕಾಲ ಸೈನ್ಯದಲ್ಲಿದ್ದ ಅವರು ‘ಚೀಫ್ ವಾರಂಟ್ ಆಫೀಸರ್’ ಆಗಿ ನಿವೃತ್ತರಾದರು. ಇರಾಕ್ ಮಾತ್ರವಲ್ಲದೆ ಯೆಮನ್ ಮತ್ತು ಉತ್ತರ ಆಫ್ರಿಕಾದಲ್ಲೂ ಅವರು ಕಾರ್ಯಾಚರಣೆ ನಡೆಸಿದ್ದಾರೆ. ಸೈನ್ಯದಿಂದ ನಿವೃತ್ತರಾದ ನಂತರ, ಅವರು ಸಿಐಎನಲ್ಲಿ ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಕೆಂಟ್ ಅವರ ಮೊದಲ ಪತ್ನಿ ಶಾನನ್ ಕೆಂಟ್ ಅಮೆರಿಕ ನೌಕಾಪಡೆಯ ಕ್ರಿಪ್ಟೋಲಾಜಿಕ್ ಟೆಕ್ನಿಷಿಯನ್ ಆಗಿದ್ದರು. ಅವರು 2019ರಲ್ಲಿ ಸಿರಿಯಾದ ಮನ್ಬಿಜ್‌ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು. 

ಶಾನನ್ ಅವರು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದರು. ಈ ಘಟನೆಯು ಜೋ ಕೆಂಟ್ ಅವರ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ್ದು, ಅವರು ಇರಾನ್ ವಿರುದ್ಧದ ಯುದ್ಧವನ್ನು ವಿರೋಧಿಸಿ ರಾಜೀನಾಮೆ ನೀಡಲು ಒಂದು ಮುಖ್ಯ ಕಾರಣ ಎನ್ನಲಾಗ್ತಿದೆ.

ಸೇನೆಯಿಂದ ಹೊರಬಂದ ನಂತರ, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಕೆಂಟ್ ಕೇಂದ್ರ ಗುಪ್ತಚರ ಸಂಸ್ಥೆಯಲ್ಲಿ (ಸಿಐಎ) ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 20 ವರ್ಷಗಳ ಕಾಲ ಸೈನ್ಯದಲ್ಲಿ ‘ಗ್ರೀನ್ ಬೆರೆಟ್’ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಅವರು, ಸಿಐಎನಲ್ಲಿನ ತಮ್ಮ ವೃತ್ತಿಜೀವನದ ನಂತರ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟರು.

ಕಾಂಗ್ರೆಸ್‌ನಲ್ಲಿ ನೈಋತ್ಯ ವಾಷಿಂಗ್ಟನ್ ರಾಜ್ಯವನ್ನು ಪ್ರತಿನಿಧಿಸಲು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಎರಡು ಬಾರಿ ಕೆಂಟ್ ಪ್ರಚಾರ ನಡೆಸಿದ್ದರು. ಆದರೆ 2022 ಮತ್ತು 2024 ಎರಡೂ ಬಾರಿಯೂ ಅವರು ಸೆಂಟ್ರಿಸ್ಟ್ ಡೆಮೋಕ್ರಾಟ್ ಅಭ್ಯರ್ಥಿ ಮೇರಿ ಗ್ಲುಸೆನ್‌ಕ್ಯಾಂಪ್ ಪೆರೆಜ್ ವಿರುದ್ಧ ಸೋಲನುಭವಿಸಿದರು.

ಜೋ ಕೆಂಟ್ ಅವರು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದಾಗಲೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲ ಗಳಿಸಿದ್ದರು. ಆದಾಗ್ಯೂ, ಅವರು ಹಲವು ವಿವಾದಗಳಿಗೆ ಸಿಲುಕಿದ್ದರು. ವಿಶೇಷವಾಗಿ, ತೀವ್ರ ಬಲಪಂಥೀಯ ಗುಂಪಾದ ‘ಪ್ರೌಡ್ ಬಾಯ್ಸ್’ ಸದಸ್ಯರೊಬ್ಬರಿಗೆ ಕನ್ಸಲ್ಟಿಂಗ್ ಫೀಸ್ ಪಾವತಿಸಿದ್ದು ದೊಡ್ಡ ಮಟ್ಟದ ಟೀಕೆಗೆ ಗುರಿಯಾಗಿತ್ತು.

ಕಟ್ಟರ್ ಬಲಪಂಥೀಯ ಜೋ ಕೆಂಟ್

ಜೋ ಕೆಂಟ್ ಅವರನ್ನು ರಾಜಕೀಯ ವಿಶ್ಲೇಷಕರು ಮತ್ತು ವಿರೋಧಿಗಳು ಸಾಮಾನ್ಯವಾಗಿ ‘ಕಟ್ಟರ್ ಬಲಪಂಥೀಯ’ ಎಂದೇ ಗುರುತಿಸುತ್ತಾರೆ.

ಏಕೆಂದರೆ, ಅವರು ಈ ಹಿಂದೆ ‘ಪ್ರೌಡ್ ಬಾಯ್ಸ್’ ನಂತಹ ತೀವ್ರಗಾಮಿ ಬಲಪಂಥೀಯ ಗುಂಪಿನ ಸದಸ್ಯರಿಗೆ ಕನ್ಸಲ್ಟಿಂಗ್ ಶುಲ್ಕ ಪಾವತಿಸಿದ್ದು ದೊಡ್ಡ ವಿವಾದವಾಗಿತ್ತು.

ಕೆಂಟ್ ಅಮೆರಿಕದ ‘MAGA’ (Make America Great Again) ಆಂದೋಲನದ ಪ್ರಬಲ ಬೆಂಬಲಿಗರು. ಅವರ ವಿಚಾರಧಾರೆಗಳು ವಲಸೆ ವಿರೋಧಿ ಮತ್ತು ಅಮೆರಿಕದ ಹಿತಾಸಕ್ತಿಗೆ ಮಾತ್ರ ಒತ್ತು ನೀಡುವ ರಾಷ್ಟ್ರೀಯತೆಯನ್ನು ಒಳಗೊಂಡಿವೆ.

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ವಾದವನ್ನು ಅವರು ಬೆಂಬಲಿಸಿದ್ದರು. ಶ್ವೇತವರ್ಣೀಯ ರಾಷ್ಟ್ರೀಯವಾದಿ ನಿಕ್ ಫ್ಯುಯೆಂಟೆಸ್ ಅವರೊಂದಿಗೆ ಅವರು ನಡೆಸಿದ ಸಂಭಾಷಣೆಯ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಕೆಂಟ್ ಅವರು ತಾವು ಕೇವಲ ‘ಅಮೆರಿಕ ಫಸ್ಟ್’ ನೀತಿಯನ್ನು ಬೆಂಬಲಿಸುವ ರಾಷ್ಟ್ರೀಯವಾದಿ ಎಂದು ಹೇಳಿಕೊಳ್ಳುತ್ತಾರೆ. ಈಗ ಅವರು ಇರಾನ್ ಯುದ್ಧದ ವಿರುದ್ಧ ರಾಜೀನಾಮೆ ನೀಡಿರುವುದು ಅವರ ಬಲಪಂಥೀಯ ನಿಲುವಿನಲ್ಲೇ ಇರುವ ‘ಹೊರದೇಶದ ಯುದ್ಧಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು’ ಎಂಬ ಸಿದ್ಧಾಂತದ ಭಾಗವಾಗಿದೆ ಎಂದು ವರದಿಗಳು ಹೇಳುತ್ತವೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...