Homeಅಂತರಾಷ್ಟ್ರೀಯಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

- Advertisement -
- Advertisement -

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ ಟ್ರಂಪ್ ಈ ಯುದ್ಧವನ್ನು ಪ್ರಾರಂಭಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಈ ಯುದ್ಧವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಜೋ ಕೆಂಟ್, ಮಂಗಳವಾರ (ಮಾ. 17) ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲ್ಲಿಸಿದ್ದಾರೆ.

ಅಮೆರಿಕದ ಪ್ರಮುಖ ಗುಪ್ತಚರ ಸಂಸ್ಥೆಯ ಮುಖ್ಯಸ್ಥರೊಬ್ಬರು ಯುದ್ಧದ ನೀತಿಯನ್ನು ವಿರೋಧಿಸಿ ಅಧಿಕಾರದಿಂದ ಕೆಳಗಿಳಿದಿರುವುದು ಈಗ ಜಾಗತಿಕ ಚರ್ಚೆಯ ವಿಷಯವಾಗಿದೆ. ಇದು ಡೊನಾಲ್ಡ್ ಟ್ರಂಪ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ ಎಂದು ಕೆಲ ವರದಿಗಳು ಹೇಳಿವೆ.

ಜೋ ಕೆಂಟ್ ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ರಂಪ್ ಅವರನ್ನು ಉದ್ದೇಶಿಸಿ ಬರೆದ ಈ ಪತ್ರದಲ್ಲಿ, ಇರಾನ್ ವಿರುದ್ಧದ ಯುದ್ಧದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ಯುದ್ಧವು ನೈತಿಕವಾಗಿ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ತಪ್ಪು” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇರಾನ್ ಜೊತೆಗಿನ ಯುದ್ದ ನನ್ನ ಆತ್ಮ ಸಾಕ್ಷಿ ಒಪ್ಪುವುದಿಲ್ಲ. ಇರಾನ್‌ನಿಂದ ನಮಗೆ ತಕ್ಷಣಕ್ಕೆ ಯಾವುದೇ ಬೆದರಿಕೆ ಇರಲಿಲ್ಲ. ಇಸ್ರೇಲ್‌ನ ಒತ್ತಡಕ್ಕೆ ಮಣಿದು ಈ ಯುದ್ಧ ಪ್ರಾರಂಭಿಸಲಾಗಿದೆ” ಎಂದಿದ್ದಾರೆ.

ಯಾರು ಈ ಜೋ ಕೆಂಟ್?

ಜೋ ಕೆಂಟ್ (45 ವರ್ಷ) ಅವರು ಈ ಹಿಂದೆ ರಾಜಕೀಯ ಅಭ್ಯರ್ಥಿಯಾಗಿದ್ದವರು ಮತ್ತು ತೀವ್ರ ಬಲಪಂಥೀಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದವರು. ಸೇನೆಯಲ್ಲಿ ‘ಗ್ರೀನ್ ಬೆರೆಟ್’ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅವರು, 2022 ಮತ್ತು 2024ರಲ್ಲಿ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸಿ ಸೋತಿದ್ದರು. ಅವರ ಬಲಪಂಥೀಯ ಒಲವು ಮತ್ತು ಕೆಲವು ವಿವಾದಾತ್ಮಕ ಗುಂಪುಗಳೊಂದಿಗಿನ ಸಂಬಂಧವು ಅವರ ರಾಜಕೀಯ ಜೀವನದಲ್ಲಿ ಸದಾ ಚರ್ಚೆಯ ವಿಷಯವಾಗಿತ್ತು.

ಅಮೆರಿಕ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕರಾಗಿರುವ ಕೆಂಟ್, ಇರಾಕ್ ಯುದ್ಧ ಸೇರಿದಂತೆ ಒಟ್ಟು 11 ಬಾರಿ ಸಕ್ರಿಯ ಯುದ್ಧ ಭೂಮಿಗಳಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 20 ವರ್ಷಗಳ ಕಾಲ ಸೈನ್ಯದಲ್ಲಿದ್ದ ಅವರು ‘ಚೀಫ್ ವಾರಂಟ್ ಆಫೀಸರ್’ ಆಗಿ ನಿವೃತ್ತರಾದರು. ಇರಾಕ್ ಮಾತ್ರವಲ್ಲದೆ ಯೆಮನ್ ಮತ್ತು ಉತ್ತರ ಆಫ್ರಿಕಾದಲ್ಲೂ ಅವರು ಕಾರ್ಯಾಚರಣೆ ನಡೆಸಿದ್ದಾರೆ. ಸೈನ್ಯದಿಂದ ನಿವೃತ್ತರಾದ ನಂತರ, ಅವರು ಸಿಐಎನಲ್ಲಿ ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಕೆಂಟ್ ಅವರ ಮೊದಲ ಪತ್ನಿ ಶಾನನ್ ಕೆಂಟ್ ಅಮೆರಿಕ ನೌಕಾಪಡೆಯ ಕ್ರಿಪ್ಟೋಲಾಜಿಕ್ ಟೆಕ್ನಿಷಿಯನ್ ಆಗಿದ್ದರು. ಅವರು 2019ರಲ್ಲಿ ಸಿರಿಯಾದ ಮನ್ಬಿಜ್‌ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು. 

ಶಾನನ್ ಅವರು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದರು. ಈ ಘಟನೆಯು ಜೋ ಕೆಂಟ್ ಅವರ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ್ದು, ಅವರು ಇರಾನ್ ವಿರುದ್ಧದ ಯುದ್ಧವನ್ನು ವಿರೋಧಿಸಿ ರಾಜೀನಾಮೆ ನೀಡಲು ಒಂದು ಮುಖ್ಯ ಕಾರಣ ಎನ್ನಲಾಗ್ತಿದೆ.

ಸೇನೆಯಿಂದ ಹೊರಬಂದ ನಂತರ, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಕೆಂಟ್ ಕೇಂದ್ರ ಗುಪ್ತಚರ ಸಂಸ್ಥೆಯಲ್ಲಿ (ಸಿಐಎ) ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 20 ವರ್ಷಗಳ ಕಾಲ ಸೈನ್ಯದಲ್ಲಿ ‘ಗ್ರೀನ್ ಬೆರೆಟ್’ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಅವರು, ಸಿಐಎನಲ್ಲಿನ ತಮ್ಮ ವೃತ್ತಿಜೀವನದ ನಂತರ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟರು.

ಕಾಂಗ್ರೆಸ್‌ನಲ್ಲಿ ನೈಋತ್ಯ ವಾಷಿಂಗ್ಟನ್ ರಾಜ್ಯವನ್ನು ಪ್ರತಿನಿಧಿಸಲು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಎರಡು ಬಾರಿ ಕೆಂಟ್ ಪ್ರಚಾರ ನಡೆಸಿದ್ದರು. ಆದರೆ 2022 ಮತ್ತು 2024 ಎರಡೂ ಬಾರಿಯೂ ಅವರು ಸೆಂಟ್ರಿಸ್ಟ್ ಡೆಮೋಕ್ರಾಟ್ ಅಭ್ಯರ್ಥಿ ಮೇರಿ ಗ್ಲುಸೆನ್‌ಕ್ಯಾಂಪ್ ಪೆರೆಜ್ ವಿರುದ್ಧ ಸೋಲನುಭವಿಸಿದರು.

ಜೋ ಕೆಂಟ್ ಅವರು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದಾಗಲೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲ ಗಳಿಸಿದ್ದರು. ಆದಾಗ್ಯೂ, ಅವರು ಹಲವು ವಿವಾದಗಳಿಗೆ ಸಿಲುಕಿದ್ದರು. ವಿಶೇಷವಾಗಿ, ತೀವ್ರ ಬಲಪಂಥೀಯ ಗುಂಪಾದ ‘ಪ್ರೌಡ್ ಬಾಯ್ಸ್’ ಸದಸ್ಯರೊಬ್ಬರಿಗೆ ಕನ್ಸಲ್ಟಿಂಗ್ ಫೀಸ್ ಪಾವತಿಸಿದ್ದು ದೊಡ್ಡ ಮಟ್ಟದ ಟೀಕೆಗೆ ಗುರಿಯಾಗಿತ್ತು.

ಕಟ್ಟರ್ ಬಲಪಂಥೀಯ ಜೋ ಕೆಂಟ್

ಜೋ ಕೆಂಟ್ ಅವರನ್ನು ರಾಜಕೀಯ ವಿಶ್ಲೇಷಕರು ಮತ್ತು ವಿರೋಧಿಗಳು ಸಾಮಾನ್ಯವಾಗಿ ‘ಕಟ್ಟರ್ ಬಲಪಂಥೀಯ’ ಎಂದೇ ಗುರುತಿಸುತ್ತಾರೆ.

ಏಕೆಂದರೆ, ಅವರು ಈ ಹಿಂದೆ ‘ಪ್ರೌಡ್ ಬಾಯ್ಸ್’ ನಂತಹ ತೀವ್ರಗಾಮಿ ಬಲಪಂಥೀಯ ಗುಂಪಿನ ಸದಸ್ಯರಿಗೆ ಕನ್ಸಲ್ಟಿಂಗ್ ಶುಲ್ಕ ಪಾವತಿಸಿದ್ದು ದೊಡ್ಡ ವಿವಾದವಾಗಿತ್ತು.

ಕೆಂಟ್ ಅಮೆರಿಕದ ‘MAGA’ (Make America Great Again) ಆಂದೋಲನದ ಪ್ರಬಲ ಬೆಂಬಲಿಗರು. ಅವರ ವಿಚಾರಧಾರೆಗಳು ವಲಸೆ ವಿರೋಧಿ ಮತ್ತು ಅಮೆರಿಕದ ಹಿತಾಸಕ್ತಿಗೆ ಮಾತ್ರ ಒತ್ತು ನೀಡುವ ರಾಷ್ಟ್ರೀಯತೆಯನ್ನು ಒಳಗೊಂಡಿವೆ.

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ವಾದವನ್ನು ಅವರು ಬೆಂಬಲಿಸಿದ್ದರು. ಶ್ವೇತವರ್ಣೀಯ ರಾಷ್ಟ್ರೀಯವಾದಿ ನಿಕ್ ಫ್ಯುಯೆಂಟೆಸ್ ಅವರೊಂದಿಗೆ ಅವರು ನಡೆಸಿದ ಸಂಭಾಷಣೆಯ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಕೆಂಟ್ ಅವರು ತಾವು ಕೇವಲ ‘ಅಮೆರಿಕ ಫಸ್ಟ್’ ನೀತಿಯನ್ನು ಬೆಂಬಲಿಸುವ ರಾಷ್ಟ್ರೀಯವಾದಿ ಎಂದು ಹೇಳಿಕೊಳ್ಳುತ್ತಾರೆ. ಈಗ ಅವರು ಇರಾನ್ ಯುದ್ಧದ ವಿರುದ್ಧ ರಾಜೀನಾಮೆ ನೀಡಿರುವುದು ಅವರ ಬಲಪಂಥೀಯ ನಿಲುವಿನಲ್ಲೇ ಇರುವ ‘ಹೊರದೇಶದ ಯುದ್ಧಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು’ ಎಂಬ ಸಿದ್ಧಾಂತದ ಭಾಗವಾಗಿದೆ ಎಂದು ವರದಿಗಳು ಹೇಳುತ್ತವೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...