Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....