Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...