Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...