Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...