Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...