Homeಮುಖಪುಟಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ...

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ ಬೆದರಿಕೆ

- Advertisement -
- Advertisement -

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ ಎಂದು ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಬಹಿರಂಗ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಜನವರಿ 20 ರಂದು ನಡೆಯುತ್ತಿರುವ ರಾಘೋಘಡ್ ನಗರ ಸ್ಥಳೀಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸೇರುವಂತೆ ಅವರು ಧಮಕಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಗುಣ ಜಿಲ್ಲೆಯ ರುಥಿಯಾಯ್ ಪಟ್ಟಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಮಹೇಂದ್ರ ಸಿಂಗ್ ಸಿಸೋಡಿಯಾ “ಕಾಂಗ್ರೆಸ್ಸಿಗರೆ ನಮ್ಮ ಕಡೆಗೆ ಸೇರಿಕೊಳ್ಳಿ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ… ಮಾಮನ ಬುಲ್ಡೋಜರ್ ಸಿದ್ಧವಾಗಿದೆ” ಎಂದು ಬೆದರಿಕೆಯ ರೀತಿಯಲ್ಲಿ ಹೇಳಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗುಣ ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ ಹರಿಶಂಕರ್ ವಿಜಯವರ್ಗಿಯಾ, “ಸಿಸೋಡಿಯಾ ಅವರು ಸ್ವಲ್ಪ ತಾಳ್ಮೆಯಿಂದ ನಡೆದುಕೊಳ್ಳಬೇಕು. ಏಕೆಂದರೆ ಜನವರಿ 20 ರಂದು ರಾಘೋಗಢ್ ನಗರ ಸ್ಥಳೀಯ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ” ಎಂದಿದ್ದಾರೆ.

ತಮ್ಮ ವಿರೋಧಿಗಳ, ಅಲ್ಪಸಂಖ್ಯಾತರರ ಅಥವಾ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ಗಳ ಮೂಲಕ ಧ್ವಂಸಗೊಳಿಸುವ ಕ್ರಮದ ಮೂಲಕ ತಮ್ಮ ಬೆಂಬಲಿಗರಿಂದ ಮಧ್ಯಪ್ರದೇಶದ ಸಿಎಂ ಶಿವರಾಜ್‌ಸಿಂಗ್ ಚೌಹಾಣ್ ಬುಲ್ಡೋಜರ್ ಮಾಮಾ ಎಂದು ಕರೆಸಿಕೊಳ್ಳುತ್ತಿದ್ದಾರೆ. ಮಾಫಿಯಾಗಳನ್ನು ಮಟ್ಟ ಹಾಕಲು ಈ ಕ್ರಮ ಅನಿವಾರ್ಯ ಎಂದು ಅವರು ಆ ಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಯಾವ ಕಾನೂನಿನಲ್ಲಿಯೂ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಲು ಅವಕಾಶವಿಲ್ಲ.

ನಮ್ಮ ದೇಶದಲ್ಲಿ ಪ್ರಜೆಗಳಾದ ನಾವು ನಮಗೆ ಅರ್ಪಿಸಿಕೊಂಡು ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರ ಪ್ರಕಾರ ಕಾನೂನುಗಳಿದ್ದು, ಯಾವುದೇ ಜನರ ವಿರುದ್ಧ ಯಾವುದೇ ಆರೋಪ ಕೇಳಿಬಂದಾಗ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಶಿಕ್ಷೆ ವಿಧಿಸುವ ಒಂದು ಸಾಂವಿಧಾನಿಕ ಪ್ರಕ್ರಿಯೆ ಇಲ್ಲಿದೆ. ಆದರೆ ಅದನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಸರ್ಕಾರ ಮುಸ್ಲಿಮರನ್ನು, ವಿರೋಧ ಪಕ್ಷದವರನ್ನು ಟಾರ್ಗೆಟ್ ಮಾಡಿ ಅವರ ಮನೆ ಉರುಳಿಸುತ್ತಿದೆ. Instant Justice (ತ್ವರಿತ ನ್ಯಾಯ) ಪರಿಕಲ್ಪನೆಯ ನಕಲಿ ಎನ್‌ಕೌಂಟರ್‌ಗಳಂತೆ, ನಕಲಿ ಡೆಮೊಲಿಶಗಳು ನಡೆಯುತ್ತಿವೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಒಂದು ಗುಂಪು ಮತ್ತು ಮಾಧ್ಯಮಗಳು ಅದನ್ನು ಸಂಭ್ರಮಿಸುವಂತೆ ನೋಡಿಕೊಳ್ಳುವ ಮೂಲಕ, ಒಪ್ಪಿಗೆಯ ಮುದ್ರೆಯೊತ್ತಲಾಗುತ್ತದೆ. ಆ ಮೂಲಕ ಬಿಜೆಪಿ ಬಹುಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟು ತನ್ನ ಅಧಿಕಾರ ಭದ್ರಗೊಳಿಸಿಕೊಳ್ಳುತ್ತಿದೆ. ಬಹುಸಂಖ್ಯಾತರ ಒಪ್ಪಿಗೆಯ ಮೇರೆಗೆ ಅಲ್ಪಸಂಖ್ಯಾತರನ್ನು ಮತ್ತು ದಮನಿತ ವರ್ಗವನ್ನು ಶೋಷಿಸುವ ಈ ಪ್ರಕ್ರಿಯೆಗೆ ಜಗತ್ತಿನಾದ್ಯಂತ ಫ್ಯಾಸಿಸಂ ಎಂದು ಕರೆಯಲಾಗುತ್ತದೆ. ಅದೀಗ ಭಾರತದಲ್ಲಿ ಬೇರು ಬಿಡುತ್ತಿದೆ.

ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...