Homeಮುಖಪುಟಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

- Advertisement -
- Advertisement -

ಇಂದು (ಸೆಪ್ಟೆಂಬರ್‌ 14) ಒಕ್ಕೂಟ ಸರ್ಕಾರ ಹಿಂದೂ ದಿವಸವನ್ನು ಆಚರಿಸುತ್ತಿದ್ದು, ಭಾರತೀಯರ ಇತರೆ ಭಾಷೆಗಳ ಮೇಲೆ ಹಿಂದಿಯನ್ನು ಹೇರುವುದು ನಿರಂತರವಾಗಿ ನಡೆಯುತ್ತಿದೆ. ಹಿಂದಿ ಭಾಷೆಗೆ ಯಾರೂ ವಿರೋಧಿಸುತ್ತಿಲ್ಲ. ಒಂದು ಭಾಷೆಯಾಗಿ ಎಲ್ಲರೂ ಹಿಂದಿಯನ್ನು ಗೌರವಿಸುತ್ತಾರೆ. ಆದರೆ ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆಯನ್ನು ಸರ್ಕಾರ ನಿರಂತರ ಮುಂದುವರಿಸುತ್ತಿದೆ. ಉದ್ಯೋಗಗಳನ್ನು ಹಿಂದಿ ಭಾಷಿಗರು ಕಿತ್ತುಕೊಳ್ಳುತ್ತಿದ್ದಾರೆ. ಹಿಂದಿಯೇತರ ಭಾಷಿಗರ ಸಾಂಸ್ಕೃತಿಕ ಅಸ್ಮಿತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ನಿರಂತರ ಹೋರಾಟ ನಡೆಯುತ್ತಿದೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಕೋರಿದ್ದಾರೆ.

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ. ಹಿಂದಿಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ. ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ. ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ. ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ,ಒಕ್ಕೂಟ ಸರ್ಕಾರದ ಹಿಂದಿ ಹೇರಿಕೆಯನ್ನು ಪ್ರತಿಯೊಬ್ಬ ಕನ್ನಡಿಗರೂ ವಿರೋಧಿಸಬೇಕು

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...