Homeಮುಖಪುಟಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

- Advertisement -
- Advertisement -

ಇಂದು (ಸೆಪ್ಟೆಂಬರ್‌ 14) ಒಕ್ಕೂಟ ಸರ್ಕಾರ ಹಿಂದೂ ದಿವಸವನ್ನು ಆಚರಿಸುತ್ತಿದ್ದು, ಭಾರತೀಯರ ಇತರೆ ಭಾಷೆಗಳ ಮೇಲೆ ಹಿಂದಿಯನ್ನು ಹೇರುವುದು ನಿರಂತರವಾಗಿ ನಡೆಯುತ್ತಿದೆ. ಹಿಂದಿ ಭಾಷೆಗೆ ಯಾರೂ ವಿರೋಧಿಸುತ್ತಿಲ್ಲ. ಒಂದು ಭಾಷೆಯಾಗಿ ಎಲ್ಲರೂ ಹಿಂದಿಯನ್ನು ಗೌರವಿಸುತ್ತಾರೆ. ಆದರೆ ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆಯನ್ನು ಸರ್ಕಾರ ನಿರಂತರ ಮುಂದುವರಿಸುತ್ತಿದೆ. ಉದ್ಯೋಗಗಳನ್ನು ಹಿಂದಿ ಭಾಷಿಗರು ಕಿತ್ತುಕೊಳ್ಳುತ್ತಿದ್ದಾರೆ. ಹಿಂದಿಯೇತರ ಭಾಷಿಗರ ಸಾಂಸ್ಕೃತಿಕ ಅಸ್ಮಿತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ನಿರಂತರ ಹೋರಾಟ ನಡೆಯುತ್ತಿದೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಕೋರಿದ್ದಾರೆ.

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ. ಹಿಂದಿಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ. ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ. ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ. ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ,ಒಕ್ಕೂಟ ಸರ್ಕಾರದ ಹಿಂದಿ ಹೇರಿಕೆಯನ್ನು ಪ್ರತಿಯೊಬ್ಬ ಕನ್ನಡಿಗರೂ ವಿರೋಧಿಸಬೇಕು

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...