Homeರಾಷ್ಟ್ರೀಯ‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾದ ಅವರು ಹೇಳಿದ್ದಾರೆ

- Advertisement -
- Advertisement -

ಅಗ್ನಿವೀರ್‌ಗಳು ಶೌರ್ಯ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆ ತಿಳಿಸಿದೆ. ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ದೇಶಭಕ್ತಿ ಅಥವಾ ಸೈನ್ಯದಲ್ಲಿ ಕೆಲಸ ಮಾಡುವುದು ಮೋಹಕ್ಕಾಗಿ ಹೊರತು ಉದ್ಯೋಗಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಸೇನಾ ವ್ಯವಹಾರಗಳ ಇಲಾಖೆಯು ಹಲವು ದೇಶಗಳೊಂದಿಗೆ 80-100 ದ್ವಿಪಕ್ಷೀಯ ವ್ಯಾಯಾಮಗಳಲ್ಲಿ ತೊಡಗಿದೆ ಎಂದು ಅವರು ಹೇಳಿದ್ದು, ಸೈನಿಕರ ಸರಾಸರಿ ವಯಸ್ಸು 26-27 ಎಂಬ ಕಲ್ಪನೆಯು ಇದರಿಂದ ಬಂದಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರವು ಅಗ್ನಿಪಥ್ ಯೋಜನೆ ಘೋಷಣೆ ಮಾಡಿದ ನಂತರ ಅದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ಮತ್ತು ಹಿಂಸಾತ್ಮಕ ಗಲಭೆಗಳು ದೇಶದಾದ್ಯಂತ ನಡೆಯುತ್ತಿವೆ. ಪ್ರತಿಭಟನೆಗಳಿಂದಾಗಿ ಸರ್ಕಾರವು ವಯೋಮಿತಿಯಲ್ಲಿ ರಿಯಾಯಿತಿಗಳನ್ನು ಘೋಷಿಸಿದೆ. ಆದರೆ ಸೇನಾ ಉದ್ಯೋಗಾಕಾಂಕ್ಷಿಗಳು ಅಲ್ಪಾವಧಿ ನೇಮಕಾತಿಯನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಹೊಸ ಯೋಜನೆಯ ಪ್ರಕಾರ, ವೈದ್ಯಕೀಯ ಶಾಖೆಗಳಲ್ಲಿರುವವರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಡೆಗಳನ್ನು ಸೇರಲು ಅಗ್ನಿಪಥ್ ಒಂದೇ ದಾರಿಯಾಗಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ, ಆದರೆ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ” ಎಂದು ಲೆಫ್ಟಿನೆಂಟ್ ಜನರಲ್ ಪುರಿ ಅವರು ಹೇಳಿದ್ದಾರೆ.

“ನಮಗೆ ದೇಶಕ್ಕೆ ಉತ್ತಮ ಅಭ್ಯರ್ಥಿ ಬೇಕು. ಆಯ್ಕೆ ಪ್ರಕ್ರಿಯೆಯು ಪಾರದರ್ಶಕ, ನ್ಯಾಯೋಚಿತ, ವಸ್ತುನಿಷ್ಠ ಮತ್ತು ಕೇಂದ್ರೀಯವಾಗಿ ನಿರ್ವಹಿಸಲ್ಪಡುತ್ತದೆ. ಸೈನಿಕರು ಭಾರತದ ದೊಡ್ಡ ಆಸ್ತಿಯಾಗಿದ್ದು, ನಾವು ಮಾಡುವ ಯಾವುದೇ ವಿಷಯವು ದೇಶದ ರಕ್ಷಣೆಗಾಗಿ” ಎಂದು ಅವರು ತಿಳಿಸಿದ್ದಾರೆ, ANI ವರದಿ ಮಾಡಿದೆ.

ಲೆಫ್ಟಿನೆಂಟ್‌ ಜನರಲ್ ಬನ್ಸಿ ಪೊನಪ್ಪ ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪೂರ್ಣ ನೇಮಕಾತಿ ವೇಳಾಪಟ್ಟಿ ಸಿದ್ಧವಾಗಿದೆ. ಅಗ್ನಿಪಥ್ ಯೋಜನೆಗೆ ನೇಮಕಾತಿ ಅಧಿಸೂಚನೆಯನ್ನು ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಭಾರತೀಯ ರಕ್ಷಣಾ ಸೇವೆಗಳಾದ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮೂವರು ಮುಖ್ಯಸ್ಥರು ಶುಕ್ರವಾರದಂದು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...