Homeರಾಷ್ಟ್ರೀಯ‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾದ ಅವರು ಹೇಳಿದ್ದಾರೆ

- Advertisement -
- Advertisement -

ಅಗ್ನಿವೀರ್‌ಗಳು ಶೌರ್ಯ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆ ತಿಳಿಸಿದೆ. ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ದೇಶಭಕ್ತಿ ಅಥವಾ ಸೈನ್ಯದಲ್ಲಿ ಕೆಲಸ ಮಾಡುವುದು ಮೋಹಕ್ಕಾಗಿ ಹೊರತು ಉದ್ಯೋಗಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಸೇನಾ ವ್ಯವಹಾರಗಳ ಇಲಾಖೆಯು ಹಲವು ದೇಶಗಳೊಂದಿಗೆ 80-100 ದ್ವಿಪಕ್ಷೀಯ ವ್ಯಾಯಾಮಗಳಲ್ಲಿ ತೊಡಗಿದೆ ಎಂದು ಅವರು ಹೇಳಿದ್ದು, ಸೈನಿಕರ ಸರಾಸರಿ ವಯಸ್ಸು 26-27 ಎಂಬ ಕಲ್ಪನೆಯು ಇದರಿಂದ ಬಂದಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರವು ಅಗ್ನಿಪಥ್ ಯೋಜನೆ ಘೋಷಣೆ ಮಾಡಿದ ನಂತರ ಅದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ಮತ್ತು ಹಿಂಸಾತ್ಮಕ ಗಲಭೆಗಳು ದೇಶದಾದ್ಯಂತ ನಡೆಯುತ್ತಿವೆ. ಪ್ರತಿಭಟನೆಗಳಿಂದಾಗಿ ಸರ್ಕಾರವು ವಯೋಮಿತಿಯಲ್ಲಿ ರಿಯಾಯಿತಿಗಳನ್ನು ಘೋಷಿಸಿದೆ. ಆದರೆ ಸೇನಾ ಉದ್ಯೋಗಾಕಾಂಕ್ಷಿಗಳು ಅಲ್ಪಾವಧಿ ನೇಮಕಾತಿಯನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಹೊಸ ಯೋಜನೆಯ ಪ್ರಕಾರ, ವೈದ್ಯಕೀಯ ಶಾಖೆಗಳಲ್ಲಿರುವವರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಡೆಗಳನ್ನು ಸೇರಲು ಅಗ್ನಿಪಥ್ ಒಂದೇ ದಾರಿಯಾಗಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ, ಆದರೆ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ” ಎಂದು ಲೆಫ್ಟಿನೆಂಟ್ ಜನರಲ್ ಪುರಿ ಅವರು ಹೇಳಿದ್ದಾರೆ.

“ನಮಗೆ ದೇಶಕ್ಕೆ ಉತ್ತಮ ಅಭ್ಯರ್ಥಿ ಬೇಕು. ಆಯ್ಕೆ ಪ್ರಕ್ರಿಯೆಯು ಪಾರದರ್ಶಕ, ನ್ಯಾಯೋಚಿತ, ವಸ್ತುನಿಷ್ಠ ಮತ್ತು ಕೇಂದ್ರೀಯವಾಗಿ ನಿರ್ವಹಿಸಲ್ಪಡುತ್ತದೆ. ಸೈನಿಕರು ಭಾರತದ ದೊಡ್ಡ ಆಸ್ತಿಯಾಗಿದ್ದು, ನಾವು ಮಾಡುವ ಯಾವುದೇ ವಿಷಯವು ದೇಶದ ರಕ್ಷಣೆಗಾಗಿ” ಎಂದು ಅವರು ತಿಳಿಸಿದ್ದಾರೆ, ANI ವರದಿ ಮಾಡಿದೆ.

ಲೆಫ್ಟಿನೆಂಟ್‌ ಜನರಲ್ ಬನ್ಸಿ ಪೊನಪ್ಪ ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪೂರ್ಣ ನೇಮಕಾತಿ ವೇಳಾಪಟ್ಟಿ ಸಿದ್ಧವಾಗಿದೆ. ಅಗ್ನಿಪಥ್ ಯೋಜನೆಗೆ ನೇಮಕಾತಿ ಅಧಿಸೂಚನೆಯನ್ನು ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಭಾರತೀಯ ರಕ್ಷಣಾ ಸೇವೆಗಳಾದ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮೂವರು ಮುಖ್ಯಸ್ಥರು ಶುಕ್ರವಾರದಂದು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...