Homeರಾಷ್ಟ್ರೀಯ‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾದ ಅವರು ಹೇಳಿದ್ದಾರೆ

- Advertisement -
- Advertisement -

ಅಗ್ನಿವೀರ್‌ಗಳು ಶೌರ್ಯ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆ ತಿಳಿಸಿದೆ. ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ದೇಶಭಕ್ತಿ ಅಥವಾ ಸೈನ್ಯದಲ್ಲಿ ಕೆಲಸ ಮಾಡುವುದು ಮೋಹಕ್ಕಾಗಿ ಹೊರತು ಉದ್ಯೋಗಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಸೇನಾ ವ್ಯವಹಾರಗಳ ಇಲಾಖೆಯು ಹಲವು ದೇಶಗಳೊಂದಿಗೆ 80-100 ದ್ವಿಪಕ್ಷೀಯ ವ್ಯಾಯಾಮಗಳಲ್ಲಿ ತೊಡಗಿದೆ ಎಂದು ಅವರು ಹೇಳಿದ್ದು, ಸೈನಿಕರ ಸರಾಸರಿ ವಯಸ್ಸು 26-27 ಎಂಬ ಕಲ್ಪನೆಯು ಇದರಿಂದ ಬಂದಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರವು ಅಗ್ನಿಪಥ್ ಯೋಜನೆ ಘೋಷಣೆ ಮಾಡಿದ ನಂತರ ಅದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ಮತ್ತು ಹಿಂಸಾತ್ಮಕ ಗಲಭೆಗಳು ದೇಶದಾದ್ಯಂತ ನಡೆಯುತ್ತಿವೆ. ಪ್ರತಿಭಟನೆಗಳಿಂದಾಗಿ ಸರ್ಕಾರವು ವಯೋಮಿತಿಯಲ್ಲಿ ರಿಯಾಯಿತಿಗಳನ್ನು ಘೋಷಿಸಿದೆ. ಆದರೆ ಸೇನಾ ಉದ್ಯೋಗಾಕಾಂಕ್ಷಿಗಳು ಅಲ್ಪಾವಧಿ ನೇಮಕಾತಿಯನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಹೊಸ ಯೋಜನೆಯ ಪ್ರಕಾರ, ವೈದ್ಯಕೀಯ ಶಾಖೆಗಳಲ್ಲಿರುವವರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಡೆಗಳನ್ನು ಸೇರಲು ಅಗ್ನಿಪಥ್ ಒಂದೇ ದಾರಿಯಾಗಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ, ಆದರೆ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ” ಎಂದು ಲೆಫ್ಟಿನೆಂಟ್ ಜನರಲ್ ಪುರಿ ಅವರು ಹೇಳಿದ್ದಾರೆ.

“ನಮಗೆ ದೇಶಕ್ಕೆ ಉತ್ತಮ ಅಭ್ಯರ್ಥಿ ಬೇಕು. ಆಯ್ಕೆ ಪ್ರಕ್ರಿಯೆಯು ಪಾರದರ್ಶಕ, ನ್ಯಾಯೋಚಿತ, ವಸ್ತುನಿಷ್ಠ ಮತ್ತು ಕೇಂದ್ರೀಯವಾಗಿ ನಿರ್ವಹಿಸಲ್ಪಡುತ್ತದೆ. ಸೈನಿಕರು ಭಾರತದ ದೊಡ್ಡ ಆಸ್ತಿಯಾಗಿದ್ದು, ನಾವು ಮಾಡುವ ಯಾವುದೇ ವಿಷಯವು ದೇಶದ ರಕ್ಷಣೆಗಾಗಿ” ಎಂದು ಅವರು ತಿಳಿಸಿದ್ದಾರೆ, ANI ವರದಿ ಮಾಡಿದೆ.

ಲೆಫ್ಟಿನೆಂಟ್‌ ಜನರಲ್ ಬನ್ಸಿ ಪೊನಪ್ಪ ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪೂರ್ಣ ನೇಮಕಾತಿ ವೇಳಾಪಟ್ಟಿ ಸಿದ್ಧವಾಗಿದೆ. ಅಗ್ನಿಪಥ್ ಯೋಜನೆಗೆ ನೇಮಕಾತಿ ಅಧಿಸೂಚನೆಯನ್ನು ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಭಾರತೀಯ ರಕ್ಷಣಾ ಸೇವೆಗಳಾದ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮೂವರು ಮುಖ್ಯಸ್ಥರು ಶುಕ್ರವಾರದಂದು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...