Homeರಾಷ್ಟ್ರೀಯ‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

‘ಸೇನೆ ಸೇರುವುದು ಉದ್ಯೋಗಕ್ಕಾಗಿ ಅಲ್ಲ’: ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ

ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾದ ಅವರು ಹೇಳಿದ್ದಾರೆ

- Advertisement -
- Advertisement -

ಅಗ್ನಿವೀರ್‌ಗಳು ಶೌರ್ಯ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ ಎಂದು ಸೇನಾ ವ್ಯವಹಾರಗಳ ಇಲಾಖೆ ತಿಳಿಸಿದೆ. ಅಲ್ಪಾವಧಿಯ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ದೇಶಭಕ್ತಿ ಅಥವಾ ಸೈನ್ಯದಲ್ಲಿ ಕೆಲಸ ಮಾಡುವುದು ಮೋಹಕ್ಕಾಗಿ ಹೊರತು ಉದ್ಯೋಗಕ್ಕಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಸೇನಾ ವ್ಯವಹಾರಗಳ ಇಲಾಖೆಯು ಹಲವು ದೇಶಗಳೊಂದಿಗೆ 80-100 ದ್ವಿಪಕ್ಷೀಯ ವ್ಯಾಯಾಮಗಳಲ್ಲಿ ತೊಡಗಿದೆ ಎಂದು ಅವರು ಹೇಳಿದ್ದು, ಸೈನಿಕರ ಸರಾಸರಿ ವಯಸ್ಸು 26-27 ಎಂಬ ಕಲ್ಪನೆಯು ಇದರಿಂದ ಬಂದಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರವು ಅಗ್ನಿಪಥ್ ಯೋಜನೆ ಘೋಷಣೆ ಮಾಡಿದ ನಂತರ ಅದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ಮತ್ತು ಹಿಂಸಾತ್ಮಕ ಗಲಭೆಗಳು ದೇಶದಾದ್ಯಂತ ನಡೆಯುತ್ತಿವೆ. ಪ್ರತಿಭಟನೆಗಳಿಂದಾಗಿ ಸರ್ಕಾರವು ವಯೋಮಿತಿಯಲ್ಲಿ ರಿಯಾಯಿತಿಗಳನ್ನು ಘೋಷಿಸಿದೆ. ಆದರೆ ಸೇನಾ ಉದ್ಯೋಗಾಕಾಂಕ್ಷಿಗಳು ಅಲ್ಪಾವಧಿ ನೇಮಕಾತಿಯನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಹೊಸ ಯೋಜನೆಯ ಪ್ರಕಾರ, ವೈದ್ಯಕೀಯ ಶಾಖೆಗಳಲ್ಲಿರುವವರನ್ನು ಹೊರತುಪಡಿಸಿ ಉಳಿದ ಎಲ್ಲಾ ಪಡೆಗಳನ್ನು ಸೇರಲು ಅಗ್ನಿಪಥ್ ಒಂದೇ ದಾರಿಯಾಗಿದೆ.

“ದೇಶದ ಪ್ರಸ್ತುತ ಪರಿಸ್ಥಿತಿಯು ಪ್ರತಿ ಖಾಲಿ ಹುದ್ದೆಗೆ 50-60 ಜನರು ಅರ್ಜಿ ಸಲ್ಲಿಸುತ್ತಾರೆ, ಆದರೆ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ” ಎಂದು ಲೆಫ್ಟಿನೆಂಟ್ ಜನರಲ್ ಪುರಿ ಅವರು ಹೇಳಿದ್ದಾರೆ.

“ನಮಗೆ ದೇಶಕ್ಕೆ ಉತ್ತಮ ಅಭ್ಯರ್ಥಿ ಬೇಕು. ಆಯ್ಕೆ ಪ್ರಕ್ರಿಯೆಯು ಪಾರದರ್ಶಕ, ನ್ಯಾಯೋಚಿತ, ವಸ್ತುನಿಷ್ಠ ಮತ್ತು ಕೇಂದ್ರೀಯವಾಗಿ ನಿರ್ವಹಿಸಲ್ಪಡುತ್ತದೆ. ಸೈನಿಕರು ಭಾರತದ ದೊಡ್ಡ ಆಸ್ತಿಯಾಗಿದ್ದು, ನಾವು ಮಾಡುವ ಯಾವುದೇ ವಿಷಯವು ದೇಶದ ರಕ್ಷಣೆಗಾಗಿ” ಎಂದು ಅವರು ತಿಳಿಸಿದ್ದಾರೆ, ANI ವರದಿ ಮಾಡಿದೆ.

ಲೆಫ್ಟಿನೆಂಟ್‌ ಜನರಲ್ ಬನ್ಸಿ ಪೊನಪ್ಪ ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಪೂರ್ಣ ನೇಮಕಾತಿ ವೇಳಾಪಟ್ಟಿ ಸಿದ್ಧವಾಗಿದೆ. ಅಗ್ನಿಪಥ್ ಯೋಜನೆಗೆ ನೇಮಕಾತಿ ಅಧಿಸೂಚನೆಯನ್ನು ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಭಾರತೀಯ ರಕ್ಷಣಾ ಸೇವೆಗಳಾದ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮೂವರು ಮುಖ್ಯಸ್ಥರು ಶುಕ್ರವಾರದಂದು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...