Homeಮುಖಪುಟಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ...

ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

- Advertisement -
- Advertisement -

ಕಳೆದ ನಾಲ್ಕು ತಿಂಗಳಿನಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸಂಸತ್ತಿನಲ್ಲಿ ನಗುವುದು ಹಾಸ್ಯ ಚಟಾಕಿ ಹಾರಿಸುವುದು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದರು.

ಮಣಿಪುರ ವಿಚಾರವಾಗಿ ಎಐಸಿಸಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಮಣಿಪುರ ಭಸ್ಮವಾಗುವುದನ್ನು ಪ್ರಧಾನಿ ಬಯಸಿದ್ದಾರೆ ಮತ್ತು ಅದಕ್ಕೆ ಅವರು ಅವಕಾಶ ನೀಡಿದ್ದಾರೆ. ನಿಜಕ್ಕೂ ಅಲ್ಲಿ ಹಿಂಸಾಚಾರ ತಡೆಯಲು ಬಯಸಿದಲ್ಲಿ ಅದಕ್ಕೆ ಬೇಕಾದ ಎಲ್ಲ ಅಸ್ತ್ರಗಳೂ ಕೇಂದ್ರ ಸರ್ಕಾರದ ಬಳಿ ಇವೆ. ಭಾರತ ಸೇನೆಯನ್ನು ಬಳಸಿಕೊಂಡು ಎರಡೇ ದಿನಗಳಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಎಲ್ಲ ಅತಿರೇಕಗಳಿಗೆ ಅಂತ್ಯ ಹಾಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

”ಮಹಿಳೆಯರು, ಮಕ್ಕಳು ನಿತ್ಯ ಸಾಯುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಅದರೂ ಸಂಸತ್ತಿನ ಮಧ್ಯದಲ್ಲಿ ಕುಳಿತು ಪ್ರಧಾನಿ ನಗುತ್ತಾರೆ, ಹಾಸ್ತ ಚಟಾಕಿ ಹಾರಿಸುತ್ತಾರೆ. ಇದು ರಾಹುಲ್ ಗಾಂಧಿ, ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳ ಕುರಿತ ವಿಚಾರ ಅಲ್ಲ, ಭಾರತದ ಕುರಿತ ವಿಚಾರ. ಬಿಜೆಪಿಯ ಒಡೆದು ಆಳುವ ಮತ್ತು ಸುಡುವ ರಾಜಕಾರಣದಿಂದಾಗಿ ಮಣಿಪುರ ರಾಜ್ಯವನ್ನು ಅಸ್ತಿತ್ವವೇ ಇಲ್ಲದಂತೆ ಸರ್ವನಾಶ ಮಾಡುತ್ತಿದೆ” ಎಂದು ಕಿಡಿಕಾರಿದರು.

”ಅವಿಶ್ವಾಸದ ನಿರ್ಣಯ ಮೇಲೆ ಎರಡು ತಾಸು ಮಾತನಾಡಿದ ಪ್ರಧಾನಿ ಮೋದಿ ನಕ್ಕಿದ್ದು, ಹಾಸ್ಯ ಚಟಾಕಿ ಹಾರಿಸಿದ್ದು, ಘೋಷಣೆ ಕೂಗಿದ್ದು ನೋಡಿದೆ ಮಣಿಪುರ ಕಳೆದ ನಾಲ್ಕು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ ಎಂಬುದನ್ನು ಅವರು ಮರೆತಂತಿದೆ. ಮಣಿಪುರದಲ್ಲಿ ಹಿಂಸಾಚಾರ ತಾಂಡವವಾಡುತ್ತಿರುವಾಗ ಎರಡು ತಾಸು ಹಾಸ್ಯ ಮಾಡುವುದು ಪುಧಾನಿ ಹುದ್ದೆಗೆ ತಕ್ಕುದಲ್ಲ” ಎಂದು ಚಾಟಿ ಬೀಸಿದರು.

”ಮಣಿಪುರದಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಬಾಳ್ವೆಯ ಭಾರತ ಪರಿಕಲ್ಪನೆಯನ್ನು ಬಿಜೆಪಿ ಕಗೊಲೆ ಮಾಡಿದೆ. ಇದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾರತ ಮಾತೆಯ ಹತ್ಯೆಗೈಯಲಾಗಿದೆ ಎಂದು ಹೇಳಿದ್ದು, ಇದರಲ್ಲಿ ತಪ್ಪೇನಿದೆ?” ಎಂದು ರಾಹುಲ್ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...