Homeಮುಖಪುಟಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ...

ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

- Advertisement -
- Advertisement -

ಕಳೆದ ನಾಲ್ಕು ತಿಂಗಳಿನಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸಂಸತ್ತಿನಲ್ಲಿ ನಗುವುದು ಹಾಸ್ಯ ಚಟಾಕಿ ಹಾರಿಸುವುದು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದರು.

ಮಣಿಪುರ ವಿಚಾರವಾಗಿ ಎಐಸಿಸಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಮಣಿಪುರ ಭಸ್ಮವಾಗುವುದನ್ನು ಪ್ರಧಾನಿ ಬಯಸಿದ್ದಾರೆ ಮತ್ತು ಅದಕ್ಕೆ ಅವರು ಅವಕಾಶ ನೀಡಿದ್ದಾರೆ. ನಿಜಕ್ಕೂ ಅಲ್ಲಿ ಹಿಂಸಾಚಾರ ತಡೆಯಲು ಬಯಸಿದಲ್ಲಿ ಅದಕ್ಕೆ ಬೇಕಾದ ಎಲ್ಲ ಅಸ್ತ್ರಗಳೂ ಕೇಂದ್ರ ಸರ್ಕಾರದ ಬಳಿ ಇವೆ. ಭಾರತ ಸೇನೆಯನ್ನು ಬಳಸಿಕೊಂಡು ಎರಡೇ ದಿನಗಳಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಎಲ್ಲ ಅತಿರೇಕಗಳಿಗೆ ಅಂತ್ಯ ಹಾಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

”ಮಹಿಳೆಯರು, ಮಕ್ಕಳು ನಿತ್ಯ ಸಾಯುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಅದರೂ ಸಂಸತ್ತಿನ ಮಧ್ಯದಲ್ಲಿ ಕುಳಿತು ಪ್ರಧಾನಿ ನಗುತ್ತಾರೆ, ಹಾಸ್ತ ಚಟಾಕಿ ಹಾರಿಸುತ್ತಾರೆ. ಇದು ರಾಹುಲ್ ಗಾಂಧಿ, ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳ ಕುರಿತ ವಿಚಾರ ಅಲ್ಲ, ಭಾರತದ ಕುರಿತ ವಿಚಾರ. ಬಿಜೆಪಿಯ ಒಡೆದು ಆಳುವ ಮತ್ತು ಸುಡುವ ರಾಜಕಾರಣದಿಂದಾಗಿ ಮಣಿಪುರ ರಾಜ್ಯವನ್ನು ಅಸ್ತಿತ್ವವೇ ಇಲ್ಲದಂತೆ ಸರ್ವನಾಶ ಮಾಡುತ್ತಿದೆ” ಎಂದು ಕಿಡಿಕಾರಿದರು.

”ಅವಿಶ್ವಾಸದ ನಿರ್ಣಯ ಮೇಲೆ ಎರಡು ತಾಸು ಮಾತನಾಡಿದ ಪ್ರಧಾನಿ ಮೋದಿ ನಕ್ಕಿದ್ದು, ಹಾಸ್ಯ ಚಟಾಕಿ ಹಾರಿಸಿದ್ದು, ಘೋಷಣೆ ಕೂಗಿದ್ದು ನೋಡಿದೆ ಮಣಿಪುರ ಕಳೆದ ನಾಲ್ಕು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ ಎಂಬುದನ್ನು ಅವರು ಮರೆತಂತಿದೆ. ಮಣಿಪುರದಲ್ಲಿ ಹಿಂಸಾಚಾರ ತಾಂಡವವಾಡುತ್ತಿರುವಾಗ ಎರಡು ತಾಸು ಹಾಸ್ಯ ಮಾಡುವುದು ಪುಧಾನಿ ಹುದ್ದೆಗೆ ತಕ್ಕುದಲ್ಲ” ಎಂದು ಚಾಟಿ ಬೀಸಿದರು.

”ಮಣಿಪುರದಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಬಾಳ್ವೆಯ ಭಾರತ ಪರಿಕಲ್ಪನೆಯನ್ನು ಬಿಜೆಪಿ ಕಗೊಲೆ ಮಾಡಿದೆ. ಇದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾರತ ಮಾತೆಯ ಹತ್ಯೆಗೈಯಲಾಗಿದೆ ಎಂದು ಹೇಳಿದ್ದು, ಇದರಲ್ಲಿ ತಪ್ಪೇನಿದೆ?” ಎಂದು ರಾಹುಲ್ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...