Homeಮುಖಪುಟಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ...

ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

- Advertisement -
- Advertisement -

ಕಳೆದ ನಾಲ್ಕು ತಿಂಗಳಿನಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸಂಸತ್ತಿನಲ್ಲಿ ನಗುವುದು ಹಾಸ್ಯ ಚಟಾಕಿ ಹಾರಿಸುವುದು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದರು.

ಮಣಿಪುರ ವಿಚಾರವಾಗಿ ಎಐಸಿಸಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಮಣಿಪುರ ಭಸ್ಮವಾಗುವುದನ್ನು ಪ್ರಧಾನಿ ಬಯಸಿದ್ದಾರೆ ಮತ್ತು ಅದಕ್ಕೆ ಅವರು ಅವಕಾಶ ನೀಡಿದ್ದಾರೆ. ನಿಜಕ್ಕೂ ಅಲ್ಲಿ ಹಿಂಸಾಚಾರ ತಡೆಯಲು ಬಯಸಿದಲ್ಲಿ ಅದಕ್ಕೆ ಬೇಕಾದ ಎಲ್ಲ ಅಸ್ತ್ರಗಳೂ ಕೇಂದ್ರ ಸರ್ಕಾರದ ಬಳಿ ಇವೆ. ಭಾರತ ಸೇನೆಯನ್ನು ಬಳಸಿಕೊಂಡು ಎರಡೇ ದಿನಗಳಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಎಲ್ಲ ಅತಿರೇಕಗಳಿಗೆ ಅಂತ್ಯ ಹಾಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

”ಮಹಿಳೆಯರು, ಮಕ್ಕಳು ನಿತ್ಯ ಸಾಯುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಅದರೂ ಸಂಸತ್ತಿನ ಮಧ್ಯದಲ್ಲಿ ಕುಳಿತು ಪ್ರಧಾನಿ ನಗುತ್ತಾರೆ, ಹಾಸ್ತ ಚಟಾಕಿ ಹಾರಿಸುತ್ತಾರೆ. ಇದು ರಾಹುಲ್ ಗಾಂಧಿ, ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳ ಕುರಿತ ವಿಚಾರ ಅಲ್ಲ, ಭಾರತದ ಕುರಿತ ವಿಚಾರ. ಬಿಜೆಪಿಯ ಒಡೆದು ಆಳುವ ಮತ್ತು ಸುಡುವ ರಾಜಕಾರಣದಿಂದಾಗಿ ಮಣಿಪುರ ರಾಜ್ಯವನ್ನು ಅಸ್ತಿತ್ವವೇ ಇಲ್ಲದಂತೆ ಸರ್ವನಾಶ ಮಾಡುತ್ತಿದೆ” ಎಂದು ಕಿಡಿಕಾರಿದರು.

”ಅವಿಶ್ವಾಸದ ನಿರ್ಣಯ ಮೇಲೆ ಎರಡು ತಾಸು ಮಾತನಾಡಿದ ಪ್ರಧಾನಿ ಮೋದಿ ನಕ್ಕಿದ್ದು, ಹಾಸ್ಯ ಚಟಾಕಿ ಹಾರಿಸಿದ್ದು, ಘೋಷಣೆ ಕೂಗಿದ್ದು ನೋಡಿದೆ ಮಣಿಪುರ ಕಳೆದ ನಾಲ್ಕು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ ಎಂಬುದನ್ನು ಅವರು ಮರೆತಂತಿದೆ. ಮಣಿಪುರದಲ್ಲಿ ಹಿಂಸಾಚಾರ ತಾಂಡವವಾಡುತ್ತಿರುವಾಗ ಎರಡು ತಾಸು ಹಾಸ್ಯ ಮಾಡುವುದು ಪುಧಾನಿ ಹುದ್ದೆಗೆ ತಕ್ಕುದಲ್ಲ” ಎಂದು ಚಾಟಿ ಬೀಸಿದರು.

”ಮಣಿಪುರದಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಬಾಳ್ವೆಯ ಭಾರತ ಪರಿಕಲ್ಪನೆಯನ್ನು ಬಿಜೆಪಿ ಕಗೊಲೆ ಮಾಡಿದೆ. ಇದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾರತ ಮಾತೆಯ ಹತ್ಯೆಗೈಯಲಾಗಿದೆ ಎಂದು ಹೇಳಿದ್ದು, ಇದರಲ್ಲಿ ತಪ್ಪೇನಿದೆ?” ಎಂದು ರಾಹುಲ್ ಪ್ರಶ್ನೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...