Homeನ್ಯಾಯ ಪಥನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು

- Advertisement -
- Advertisement -

ಪುಟಕ್ಕಿಟ್ಟ ಪುಟಗಳು – ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್

  • ಯೋಗೇಶ್ ಮಾಸ್ಟರ್

ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.

ಎಳೆಯ ವಯಸ್ಸಿನ ಜೊನಾತನ್ ಎಂಬ ಸೀಗಲ್ ಮೊದಮೊದಲು ತಾನೂ ಇತರ ಸಮುದ್ರದ ಬೆಳ್ಳಕ್ಕಿಗಳಂತೆ ಅವುಗಳೊಡನೆ ಇದ್ದವನೇ. ಆದರೆ ಆ ಹಕ್ಕಿಗಳು ಬದುಕಿದ್ದದ್ದೇ ಬರೀ ತಿನ್ನುವುದಕ್ಕೆ. ತಿನ್ನುವುದು ಮತ್ತು ತಿಂದು ಬದುಕಿರುವುದು ಅವುಗಳ ಬದುಕು. ಅದೇ ಅವುಗಳ ರೂಢಿ. ಹಾಗಿರುವುದೇ ತಮ್ಮ ಹಣೆಬರಹ ಎಂಬುದು ಆ ಹಕ್ಕಿಗಳ ಸಮಾಜದ ನಂಬಿಕೆ. ಆದರೆ ಜೊನಾತನಿಗೆ ಅದು ಬಹಳ ಬೇಸರ. ಹೊಸತನ್ನು ಮಾಡುವ ತುಡಿತ. ತಿನ್ನುವುದಕ್ಕಷ್ಟೇ ಹಾರುವುದರ ಹೊರತಾಗಿ ದೂರಕ್ಕೆ, ಎತ್ತರಕ್ಕೆ, ಹೊಸತಿಗೆ ವೇಗದಲ್ಲಿ ಸಾಗುವ ಅದಮ್ಯ ಬಯಕೆ. ಅವನ ಹಾರುವ ಕನಸಿನ ಶಕ್ತಿಯನ್ನು ಸೀಮಿತಗೊಳಿಸುವ ಅವನ ಪರಿವಾರದೊಂದಿಗೆ ಅವನ ಸಂಘರ್ಷ. ಅವನದು ಉದ್ಧಟತನವೆಂದು ಸೀಗಲ್ ಹಕ್ಕಿಗಳ ಪರಿವಾರ ಅವನನ್ನು ಬಹಿಷ್ಕರಿಸಿದಾಗ ಅವನು ಒಂಟಿ.

ಒಂಟಿಯಾಗಿ ಸಾಗಿದಾಗಲೇ ಹೊಸ ಶಕ್ತಿಗಳ ಪರಿಚಯ. ಅದರಂತೆ ಅವನಿಗೆ ಉನ್ನತಕ್ಕೆ ಹಾರಲು ಉತ್ತೇಜಿಸುವ ಪಕ್ಷಿಗಳ ಸಹವಾಸವಾಗಿ ಅವನು ತರಾವರಿಯಾಗಿ ಬಾನಂಗಳದಲ್ಲಿ ಹಾರಲು ಕಲಿಯುವನು. ವಿವಿಧ ಒಳನೋಟ ಮತ್ತು ಹಾರುವ ಪಾಠಗಳೊಂದಿಗೆ ತನ್ನ ಪರಿವಾರಕ್ಕೆ ಮರಳುವನು.

ಈಗ ಜೊನಾತನನೇ ಗುರು. ಇತರ ಸೀಗಲ್ಲುಗಳು ಅವನಿಂದ ಹಾರಲು ಕಲಿಯುವವು. ತಮ್ಮಲ್ಲಿಯೂ ಅಮಿತವಾದ ಶಕ್ತಿ ಇದೆ ಎಂದು ಅರಿಯುವವು. ಒಟ್ಟಾರೆ ಪರಿವಾರವು ನನ್ನ ಬಗ್ಗೆ ಏನೇ ಹೇಳಿದರೂ, ನಾನು ನಾನಾಗಿ ಇರಲು ಸಂಪೂರ್ಣ ಸ್ವಾತಂತ್ರ್ಯವನ್ನು ನಾನೇ ಪಡೆದುಕೊಳ್ಳಬೇಕು ಎಂದು ಅರ್ಥಮಾಡಿಕೊಳ್ಳುವವು. ಮಿತಿಗಳನ್ನು ಮೀರುವ ನನ್ನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಇಲ್ಲೇ ಈಗಲೇ ನಾನೇ ಪಡೆದುಕೊಳ್ಳಬೇಕು. ನನ್ನತನದ ದಾರಿಯಲ್ಲಿ ಯಾವುದೂ ನನ್ನ ತಡೆಯಲಾಗದು, ನಾನು ಏನಾಗಬೇಕೆಂದು ಬಯಸುತ್ತೇನೆಯೋ ಅದು ಈಗಾಗಲೇ ಆಗಿರುವಂತೆ ಭಾವಿಸಿ, ಆ ಭಾವಶಕ್ತಿಯಿಂದಲೇ ಸಾಧಿಸುವುದು; ಇವೇ ಆ ಪ್ರೇರಣೆಗಳು.

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು.

ಪುಟಪುಟಗಳಲ್ಲಿಯೂ ತಾತ್ವಿಕತೆಯ ಒಳನೋಟಗಳನ್ನು ಹಂಚಿಕೊಳ್ಳುವ ಜೊನಾತನ್ ಅಷ್ಟೊಂದು ಜನಪ್ರಿಯವಾಗಿದ್ದು ನಾನಾ ಕಾರಣಗಳಿಂದ.

ಸ್ವತಃ ಪೈಲೆಟ್ ಆಗಿದ್ದ ರಿಚರ್ಡ್ ಬ್ಯಾಕ್ ತಮ್ಮ ಹಾರುವಿಕೆಯಲ್ಲಿ ಕಂಡುಕೊಂಡಿದ್ದ ಸತ್ಯ, ಸೌಂದರ್ಯ ಮತ್ತು ಅನುಭವಗಳನ್ನೆಲ್ಲಾ ಜೊನಾತನ್ ಸೀಗಲ್ಲಿನಲ್ಲಿ ಪ್ರತಿಫಲಿಸಿದ್ದರು. ಅವರ ಅನುಭವಗಳ ಗಾಢತೆ ಅನುಭೂತಿಯಾಗಿ ಆಧ್ಯಾತ್ಮಿಕತೆಯ ಒಳನೋಟಗಳನ್ನೂ ಈ ಪುಸ್ತಕ ಫಲಿಸಿತ್ತು. ವ್ಯಕ್ತಿಗತವಾಗಿ ಯಾರೊಬ್ಬರೂ ತಮ್ಮ ಮಿತಿಗಳನ್ನು ಮೀರಲು ಇರುವ ಸಾಧ್ಯತೆಗಳ ಕಂಡುಕೊಳ್ಳಲು ಪ್ರೇರಣೆಯಾಗಿತ್ತು. ಸಾಂಪ್ರದಾಯಿಕವಾದ ಸಮಾಜದ ಚೌಕಟ್ಟುಗಳ ಮಿತಿಗಳನ್ನು ಮೀರಲು ಉತ್ತೇಜಿಸಿತ್ತು. ಮಿಗಿಲಾಗಿ ಪುಸ್ತಕ ಓದುತ್ತಿದ್ದರೆ ಜೊನಾತನ್ ಬದುಕನ್ನು ದೃಶ್ಯದಲ್ಲಿಯೇ ಕಟ್ಟಿಕೊಡುವಂತಹ ಶೈಲಿ ಬರವಣಿಗೆಯದಾಗಿತ್ತು.

ಈಗಲೂ ಜೊನಾತನ್ ಬಲ್ಲವರಿಗೆ ಅದೊಂದು ಪ್ರೇರಣೆಯ ರೂಪಕ ಶಕ್ತಿಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...