Homeನ್ಯಾಯ ಪಥನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು

- Advertisement -
- Advertisement -

ಪುಟಕ್ಕಿಟ್ಟ ಪುಟಗಳು – ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್

  • ಯೋಗೇಶ್ ಮಾಸ್ಟರ್

ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.

ಎಳೆಯ ವಯಸ್ಸಿನ ಜೊನಾತನ್ ಎಂಬ ಸೀಗಲ್ ಮೊದಮೊದಲು ತಾನೂ ಇತರ ಸಮುದ್ರದ ಬೆಳ್ಳಕ್ಕಿಗಳಂತೆ ಅವುಗಳೊಡನೆ ಇದ್ದವನೇ. ಆದರೆ ಆ ಹಕ್ಕಿಗಳು ಬದುಕಿದ್ದದ್ದೇ ಬರೀ ತಿನ್ನುವುದಕ್ಕೆ. ತಿನ್ನುವುದು ಮತ್ತು ತಿಂದು ಬದುಕಿರುವುದು ಅವುಗಳ ಬದುಕು. ಅದೇ ಅವುಗಳ ರೂಢಿ. ಹಾಗಿರುವುದೇ ತಮ್ಮ ಹಣೆಬರಹ ಎಂಬುದು ಆ ಹಕ್ಕಿಗಳ ಸಮಾಜದ ನಂಬಿಕೆ. ಆದರೆ ಜೊನಾತನಿಗೆ ಅದು ಬಹಳ ಬೇಸರ. ಹೊಸತನ್ನು ಮಾಡುವ ತುಡಿತ. ತಿನ್ನುವುದಕ್ಕಷ್ಟೇ ಹಾರುವುದರ ಹೊರತಾಗಿ ದೂರಕ್ಕೆ, ಎತ್ತರಕ್ಕೆ, ಹೊಸತಿಗೆ ವೇಗದಲ್ಲಿ ಸಾಗುವ ಅದಮ್ಯ ಬಯಕೆ. ಅವನ ಹಾರುವ ಕನಸಿನ ಶಕ್ತಿಯನ್ನು ಸೀಮಿತಗೊಳಿಸುವ ಅವನ ಪರಿವಾರದೊಂದಿಗೆ ಅವನ ಸಂಘರ್ಷ. ಅವನದು ಉದ್ಧಟತನವೆಂದು ಸೀಗಲ್ ಹಕ್ಕಿಗಳ ಪರಿವಾರ ಅವನನ್ನು ಬಹಿಷ್ಕರಿಸಿದಾಗ ಅವನು ಒಂಟಿ.

ಒಂಟಿಯಾಗಿ ಸಾಗಿದಾಗಲೇ ಹೊಸ ಶಕ್ತಿಗಳ ಪರಿಚಯ. ಅದರಂತೆ ಅವನಿಗೆ ಉನ್ನತಕ್ಕೆ ಹಾರಲು ಉತ್ತೇಜಿಸುವ ಪಕ್ಷಿಗಳ ಸಹವಾಸವಾಗಿ ಅವನು ತರಾವರಿಯಾಗಿ ಬಾನಂಗಳದಲ್ಲಿ ಹಾರಲು ಕಲಿಯುವನು. ವಿವಿಧ ಒಳನೋಟ ಮತ್ತು ಹಾರುವ ಪಾಠಗಳೊಂದಿಗೆ ತನ್ನ ಪರಿವಾರಕ್ಕೆ ಮರಳುವನು.

ಈಗ ಜೊನಾತನನೇ ಗುರು. ಇತರ ಸೀಗಲ್ಲುಗಳು ಅವನಿಂದ ಹಾರಲು ಕಲಿಯುವವು. ತಮ್ಮಲ್ಲಿಯೂ ಅಮಿತವಾದ ಶಕ್ತಿ ಇದೆ ಎಂದು ಅರಿಯುವವು. ಒಟ್ಟಾರೆ ಪರಿವಾರವು ನನ್ನ ಬಗ್ಗೆ ಏನೇ ಹೇಳಿದರೂ, ನಾನು ನಾನಾಗಿ ಇರಲು ಸಂಪೂರ್ಣ ಸ್ವಾತಂತ್ರ್ಯವನ್ನು ನಾನೇ ಪಡೆದುಕೊಳ್ಳಬೇಕು ಎಂದು ಅರ್ಥಮಾಡಿಕೊಳ್ಳುವವು. ಮಿತಿಗಳನ್ನು ಮೀರುವ ನನ್ನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಇಲ್ಲೇ ಈಗಲೇ ನಾನೇ ಪಡೆದುಕೊಳ್ಳಬೇಕು. ನನ್ನತನದ ದಾರಿಯಲ್ಲಿ ಯಾವುದೂ ನನ್ನ ತಡೆಯಲಾಗದು, ನಾನು ಏನಾಗಬೇಕೆಂದು ಬಯಸುತ್ತೇನೆಯೋ ಅದು ಈಗಾಗಲೇ ಆಗಿರುವಂತೆ ಭಾವಿಸಿ, ಆ ಭಾವಶಕ್ತಿಯಿಂದಲೇ ಸಾಧಿಸುವುದು; ಇವೇ ಆ ಪ್ರೇರಣೆಗಳು.

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು.

ಪುಟಪುಟಗಳಲ್ಲಿಯೂ ತಾತ್ವಿಕತೆಯ ಒಳನೋಟಗಳನ್ನು ಹಂಚಿಕೊಳ್ಳುವ ಜೊನಾತನ್ ಅಷ್ಟೊಂದು ಜನಪ್ರಿಯವಾಗಿದ್ದು ನಾನಾ ಕಾರಣಗಳಿಂದ.

ಸ್ವತಃ ಪೈಲೆಟ್ ಆಗಿದ್ದ ರಿಚರ್ಡ್ ಬ್ಯಾಕ್ ತಮ್ಮ ಹಾರುವಿಕೆಯಲ್ಲಿ ಕಂಡುಕೊಂಡಿದ್ದ ಸತ್ಯ, ಸೌಂದರ್ಯ ಮತ್ತು ಅನುಭವಗಳನ್ನೆಲ್ಲಾ ಜೊನಾತನ್ ಸೀಗಲ್ಲಿನಲ್ಲಿ ಪ್ರತಿಫಲಿಸಿದ್ದರು. ಅವರ ಅನುಭವಗಳ ಗಾಢತೆ ಅನುಭೂತಿಯಾಗಿ ಆಧ್ಯಾತ್ಮಿಕತೆಯ ಒಳನೋಟಗಳನ್ನೂ ಈ ಪುಸ್ತಕ ಫಲಿಸಿತ್ತು. ವ್ಯಕ್ತಿಗತವಾಗಿ ಯಾರೊಬ್ಬರೂ ತಮ್ಮ ಮಿತಿಗಳನ್ನು ಮೀರಲು ಇರುವ ಸಾಧ್ಯತೆಗಳ ಕಂಡುಕೊಳ್ಳಲು ಪ್ರೇರಣೆಯಾಗಿತ್ತು. ಸಾಂಪ್ರದಾಯಿಕವಾದ ಸಮಾಜದ ಚೌಕಟ್ಟುಗಳ ಮಿತಿಗಳನ್ನು ಮೀರಲು ಉತ್ತೇಜಿಸಿತ್ತು. ಮಿಗಿಲಾಗಿ ಪುಸ್ತಕ ಓದುತ್ತಿದ್ದರೆ ಜೊನಾತನ್ ಬದುಕನ್ನು ದೃಶ್ಯದಲ್ಲಿಯೇ ಕಟ್ಟಿಕೊಡುವಂತಹ ಶೈಲಿ ಬರವಣಿಗೆಯದಾಗಿತ್ತು.

ಈಗಲೂ ಜೊನಾತನ್ ಬಲ್ಲವರಿಗೆ ಅದೊಂದು ಪ್ರೇರಣೆಯ ರೂಪಕ ಶಕ್ತಿಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...