Homeನ್ಯಾಯ ಪಥನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು

- Advertisement -
- Advertisement -

ಪುಟಕ್ಕಿಟ್ಟ ಪುಟಗಳು – ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್

  • ಯೋಗೇಶ್ ಮಾಸ್ಟರ್

ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.

ಎಳೆಯ ವಯಸ್ಸಿನ ಜೊನಾತನ್ ಎಂಬ ಸೀಗಲ್ ಮೊದಮೊದಲು ತಾನೂ ಇತರ ಸಮುದ್ರದ ಬೆಳ್ಳಕ್ಕಿಗಳಂತೆ ಅವುಗಳೊಡನೆ ಇದ್ದವನೇ. ಆದರೆ ಆ ಹಕ್ಕಿಗಳು ಬದುಕಿದ್ದದ್ದೇ ಬರೀ ತಿನ್ನುವುದಕ್ಕೆ. ತಿನ್ನುವುದು ಮತ್ತು ತಿಂದು ಬದುಕಿರುವುದು ಅವುಗಳ ಬದುಕು. ಅದೇ ಅವುಗಳ ರೂಢಿ. ಹಾಗಿರುವುದೇ ತಮ್ಮ ಹಣೆಬರಹ ಎಂಬುದು ಆ ಹಕ್ಕಿಗಳ ಸಮಾಜದ ನಂಬಿಕೆ. ಆದರೆ ಜೊನಾತನಿಗೆ ಅದು ಬಹಳ ಬೇಸರ. ಹೊಸತನ್ನು ಮಾಡುವ ತುಡಿತ. ತಿನ್ನುವುದಕ್ಕಷ್ಟೇ ಹಾರುವುದರ ಹೊರತಾಗಿ ದೂರಕ್ಕೆ, ಎತ್ತರಕ್ಕೆ, ಹೊಸತಿಗೆ ವೇಗದಲ್ಲಿ ಸಾಗುವ ಅದಮ್ಯ ಬಯಕೆ. ಅವನ ಹಾರುವ ಕನಸಿನ ಶಕ್ತಿಯನ್ನು ಸೀಮಿತಗೊಳಿಸುವ ಅವನ ಪರಿವಾರದೊಂದಿಗೆ ಅವನ ಸಂಘರ್ಷ. ಅವನದು ಉದ್ಧಟತನವೆಂದು ಸೀಗಲ್ ಹಕ್ಕಿಗಳ ಪರಿವಾರ ಅವನನ್ನು ಬಹಿಷ್ಕರಿಸಿದಾಗ ಅವನು ಒಂಟಿ.

ಒಂಟಿಯಾಗಿ ಸಾಗಿದಾಗಲೇ ಹೊಸ ಶಕ್ತಿಗಳ ಪರಿಚಯ. ಅದರಂತೆ ಅವನಿಗೆ ಉನ್ನತಕ್ಕೆ ಹಾರಲು ಉತ್ತೇಜಿಸುವ ಪಕ್ಷಿಗಳ ಸಹವಾಸವಾಗಿ ಅವನು ತರಾವರಿಯಾಗಿ ಬಾನಂಗಳದಲ್ಲಿ ಹಾರಲು ಕಲಿಯುವನು. ವಿವಿಧ ಒಳನೋಟ ಮತ್ತು ಹಾರುವ ಪಾಠಗಳೊಂದಿಗೆ ತನ್ನ ಪರಿವಾರಕ್ಕೆ ಮರಳುವನು.

ಈಗ ಜೊನಾತನನೇ ಗುರು. ಇತರ ಸೀಗಲ್ಲುಗಳು ಅವನಿಂದ ಹಾರಲು ಕಲಿಯುವವು. ತಮ್ಮಲ್ಲಿಯೂ ಅಮಿತವಾದ ಶಕ್ತಿ ಇದೆ ಎಂದು ಅರಿಯುವವು. ಒಟ್ಟಾರೆ ಪರಿವಾರವು ನನ್ನ ಬಗ್ಗೆ ಏನೇ ಹೇಳಿದರೂ, ನಾನು ನಾನಾಗಿ ಇರಲು ಸಂಪೂರ್ಣ ಸ್ವಾತಂತ್ರ್ಯವನ್ನು ನಾನೇ ಪಡೆದುಕೊಳ್ಳಬೇಕು ಎಂದು ಅರ್ಥಮಾಡಿಕೊಳ್ಳುವವು. ಮಿತಿಗಳನ್ನು ಮೀರುವ ನನ್ನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಇಲ್ಲೇ ಈಗಲೇ ನಾನೇ ಪಡೆದುಕೊಳ್ಳಬೇಕು. ನನ್ನತನದ ದಾರಿಯಲ್ಲಿ ಯಾವುದೂ ನನ್ನ ತಡೆಯಲಾಗದು, ನಾನು ಏನಾಗಬೇಕೆಂದು ಬಯಸುತ್ತೇನೆಯೋ ಅದು ಈಗಾಗಲೇ ಆಗಿರುವಂತೆ ಭಾವಿಸಿ, ಆ ಭಾವಶಕ್ತಿಯಿಂದಲೇ ಸಾಧಿಸುವುದು; ಇವೇ ಆ ಪ್ರೇರಣೆಗಳು.

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು.

ಪುಟಪುಟಗಳಲ್ಲಿಯೂ ತಾತ್ವಿಕತೆಯ ಒಳನೋಟಗಳನ್ನು ಹಂಚಿಕೊಳ್ಳುವ ಜೊನಾತನ್ ಅಷ್ಟೊಂದು ಜನಪ್ರಿಯವಾಗಿದ್ದು ನಾನಾ ಕಾರಣಗಳಿಂದ.

ಸ್ವತಃ ಪೈಲೆಟ್ ಆಗಿದ್ದ ರಿಚರ್ಡ್ ಬ್ಯಾಕ್ ತಮ್ಮ ಹಾರುವಿಕೆಯಲ್ಲಿ ಕಂಡುಕೊಂಡಿದ್ದ ಸತ್ಯ, ಸೌಂದರ್ಯ ಮತ್ತು ಅನುಭವಗಳನ್ನೆಲ್ಲಾ ಜೊನಾತನ್ ಸೀಗಲ್ಲಿನಲ್ಲಿ ಪ್ರತಿಫಲಿಸಿದ್ದರು. ಅವರ ಅನುಭವಗಳ ಗಾಢತೆ ಅನುಭೂತಿಯಾಗಿ ಆಧ್ಯಾತ್ಮಿಕತೆಯ ಒಳನೋಟಗಳನ್ನೂ ಈ ಪುಸ್ತಕ ಫಲಿಸಿತ್ತು. ವ್ಯಕ್ತಿಗತವಾಗಿ ಯಾರೊಬ್ಬರೂ ತಮ್ಮ ಮಿತಿಗಳನ್ನು ಮೀರಲು ಇರುವ ಸಾಧ್ಯತೆಗಳ ಕಂಡುಕೊಳ್ಳಲು ಪ್ರೇರಣೆಯಾಗಿತ್ತು. ಸಾಂಪ್ರದಾಯಿಕವಾದ ಸಮಾಜದ ಚೌಕಟ್ಟುಗಳ ಮಿತಿಗಳನ್ನು ಮೀರಲು ಉತ್ತೇಜಿಸಿತ್ತು. ಮಿಗಿಲಾಗಿ ಪುಸ್ತಕ ಓದುತ್ತಿದ್ದರೆ ಜೊನಾತನ್ ಬದುಕನ್ನು ದೃಶ್ಯದಲ್ಲಿಯೇ ಕಟ್ಟಿಕೊಡುವಂತಹ ಶೈಲಿ ಬರವಣಿಗೆಯದಾಗಿತ್ತು.

ಈಗಲೂ ಜೊನಾತನ್ ಬಲ್ಲವರಿಗೆ ಅದೊಂದು ಪ್ರೇರಣೆಯ ರೂಪಕ ಶಕ್ತಿಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...