Homeನ್ಯಾಯ ಪಥನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು

- Advertisement -
- Advertisement -

ಪುಟಕ್ಕಿಟ್ಟ ಪುಟಗಳು – ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್

  • ಯೋಗೇಶ್ ಮಾಸ್ಟರ್

ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.

ಎಳೆಯ ವಯಸ್ಸಿನ ಜೊನಾತನ್ ಎಂಬ ಸೀಗಲ್ ಮೊದಮೊದಲು ತಾನೂ ಇತರ ಸಮುದ್ರದ ಬೆಳ್ಳಕ್ಕಿಗಳಂತೆ ಅವುಗಳೊಡನೆ ಇದ್ದವನೇ. ಆದರೆ ಆ ಹಕ್ಕಿಗಳು ಬದುಕಿದ್ದದ್ದೇ ಬರೀ ತಿನ್ನುವುದಕ್ಕೆ. ತಿನ್ನುವುದು ಮತ್ತು ತಿಂದು ಬದುಕಿರುವುದು ಅವುಗಳ ಬದುಕು. ಅದೇ ಅವುಗಳ ರೂಢಿ. ಹಾಗಿರುವುದೇ ತಮ್ಮ ಹಣೆಬರಹ ಎಂಬುದು ಆ ಹಕ್ಕಿಗಳ ಸಮಾಜದ ನಂಬಿಕೆ. ಆದರೆ ಜೊನಾತನಿಗೆ ಅದು ಬಹಳ ಬೇಸರ. ಹೊಸತನ್ನು ಮಾಡುವ ತುಡಿತ. ತಿನ್ನುವುದಕ್ಕಷ್ಟೇ ಹಾರುವುದರ ಹೊರತಾಗಿ ದೂರಕ್ಕೆ, ಎತ್ತರಕ್ಕೆ, ಹೊಸತಿಗೆ ವೇಗದಲ್ಲಿ ಸಾಗುವ ಅದಮ್ಯ ಬಯಕೆ. ಅವನ ಹಾರುವ ಕನಸಿನ ಶಕ್ತಿಯನ್ನು ಸೀಮಿತಗೊಳಿಸುವ ಅವನ ಪರಿವಾರದೊಂದಿಗೆ ಅವನ ಸಂಘರ್ಷ. ಅವನದು ಉದ್ಧಟತನವೆಂದು ಸೀಗಲ್ ಹಕ್ಕಿಗಳ ಪರಿವಾರ ಅವನನ್ನು ಬಹಿಷ್ಕರಿಸಿದಾಗ ಅವನು ಒಂಟಿ.

ಒಂಟಿಯಾಗಿ ಸಾಗಿದಾಗಲೇ ಹೊಸ ಶಕ್ತಿಗಳ ಪರಿಚಯ. ಅದರಂತೆ ಅವನಿಗೆ ಉನ್ನತಕ್ಕೆ ಹಾರಲು ಉತ್ತೇಜಿಸುವ ಪಕ್ಷಿಗಳ ಸಹವಾಸವಾಗಿ ಅವನು ತರಾವರಿಯಾಗಿ ಬಾನಂಗಳದಲ್ಲಿ ಹಾರಲು ಕಲಿಯುವನು. ವಿವಿಧ ಒಳನೋಟ ಮತ್ತು ಹಾರುವ ಪಾಠಗಳೊಂದಿಗೆ ತನ್ನ ಪರಿವಾರಕ್ಕೆ ಮರಳುವನು.

ಈಗ ಜೊನಾತನನೇ ಗುರು. ಇತರ ಸೀಗಲ್ಲುಗಳು ಅವನಿಂದ ಹಾರಲು ಕಲಿಯುವವು. ತಮ್ಮಲ್ಲಿಯೂ ಅಮಿತವಾದ ಶಕ್ತಿ ಇದೆ ಎಂದು ಅರಿಯುವವು. ಒಟ್ಟಾರೆ ಪರಿವಾರವು ನನ್ನ ಬಗ್ಗೆ ಏನೇ ಹೇಳಿದರೂ, ನಾನು ನಾನಾಗಿ ಇರಲು ಸಂಪೂರ್ಣ ಸ್ವಾತಂತ್ರ್ಯವನ್ನು ನಾನೇ ಪಡೆದುಕೊಳ್ಳಬೇಕು ಎಂದು ಅರ್ಥಮಾಡಿಕೊಳ್ಳುವವು. ಮಿತಿಗಳನ್ನು ಮೀರುವ ನನ್ನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಇಲ್ಲೇ ಈಗಲೇ ನಾನೇ ಪಡೆದುಕೊಳ್ಳಬೇಕು. ನನ್ನತನದ ದಾರಿಯಲ್ಲಿ ಯಾವುದೂ ನನ್ನ ತಡೆಯಲಾಗದು, ನಾನು ಏನಾಗಬೇಕೆಂದು ಬಯಸುತ್ತೇನೆಯೋ ಅದು ಈಗಾಗಲೇ ಆಗಿರುವಂತೆ ಭಾವಿಸಿ, ಆ ಭಾವಶಕ್ತಿಯಿಂದಲೇ ಸಾಧಿಸುವುದು; ಇವೇ ಆ ಪ್ರೇರಣೆಗಳು.

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು.

ಪುಟಪುಟಗಳಲ್ಲಿಯೂ ತಾತ್ವಿಕತೆಯ ಒಳನೋಟಗಳನ್ನು ಹಂಚಿಕೊಳ್ಳುವ ಜೊನಾತನ್ ಅಷ್ಟೊಂದು ಜನಪ್ರಿಯವಾಗಿದ್ದು ನಾನಾ ಕಾರಣಗಳಿಂದ.

ಸ್ವತಃ ಪೈಲೆಟ್ ಆಗಿದ್ದ ರಿಚರ್ಡ್ ಬ್ಯಾಕ್ ತಮ್ಮ ಹಾರುವಿಕೆಯಲ್ಲಿ ಕಂಡುಕೊಂಡಿದ್ದ ಸತ್ಯ, ಸೌಂದರ್ಯ ಮತ್ತು ಅನುಭವಗಳನ್ನೆಲ್ಲಾ ಜೊನಾತನ್ ಸೀಗಲ್ಲಿನಲ್ಲಿ ಪ್ರತಿಫಲಿಸಿದ್ದರು. ಅವರ ಅನುಭವಗಳ ಗಾಢತೆ ಅನುಭೂತಿಯಾಗಿ ಆಧ್ಯಾತ್ಮಿಕತೆಯ ಒಳನೋಟಗಳನ್ನೂ ಈ ಪುಸ್ತಕ ಫಲಿಸಿತ್ತು. ವ್ಯಕ್ತಿಗತವಾಗಿ ಯಾರೊಬ್ಬರೂ ತಮ್ಮ ಮಿತಿಗಳನ್ನು ಮೀರಲು ಇರುವ ಸಾಧ್ಯತೆಗಳ ಕಂಡುಕೊಳ್ಳಲು ಪ್ರೇರಣೆಯಾಗಿತ್ತು. ಸಾಂಪ್ರದಾಯಿಕವಾದ ಸಮಾಜದ ಚೌಕಟ್ಟುಗಳ ಮಿತಿಗಳನ್ನು ಮೀರಲು ಉತ್ತೇಜಿಸಿತ್ತು. ಮಿಗಿಲಾಗಿ ಪುಸ್ತಕ ಓದುತ್ತಿದ್ದರೆ ಜೊನಾತನ್ ಬದುಕನ್ನು ದೃಶ್ಯದಲ್ಲಿಯೇ ಕಟ್ಟಿಕೊಡುವಂತಹ ಶೈಲಿ ಬರವಣಿಗೆಯದಾಗಿತ್ತು.

ಈಗಲೂ ಜೊನಾತನ್ ಬಲ್ಲವರಿಗೆ ಅದೊಂದು ಪ್ರೇರಣೆಯ ರೂಪಕ ಶಕ್ತಿಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...