Homeನ್ಯಾಯ ಪಥನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು

- Advertisement -
- Advertisement -

ಪುಟಕ್ಕಿಟ್ಟ ಪುಟಗಳು – ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್

  • ಯೋಗೇಶ್ ಮಾಸ್ಟರ್

ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.

ಎಳೆಯ ವಯಸ್ಸಿನ ಜೊನಾತನ್ ಎಂಬ ಸೀಗಲ್ ಮೊದಮೊದಲು ತಾನೂ ಇತರ ಸಮುದ್ರದ ಬೆಳ್ಳಕ್ಕಿಗಳಂತೆ ಅವುಗಳೊಡನೆ ಇದ್ದವನೇ. ಆದರೆ ಆ ಹಕ್ಕಿಗಳು ಬದುಕಿದ್ದದ್ದೇ ಬರೀ ತಿನ್ನುವುದಕ್ಕೆ. ತಿನ್ನುವುದು ಮತ್ತು ತಿಂದು ಬದುಕಿರುವುದು ಅವುಗಳ ಬದುಕು. ಅದೇ ಅವುಗಳ ರೂಢಿ. ಹಾಗಿರುವುದೇ ತಮ್ಮ ಹಣೆಬರಹ ಎಂಬುದು ಆ ಹಕ್ಕಿಗಳ ಸಮಾಜದ ನಂಬಿಕೆ. ಆದರೆ ಜೊನಾತನಿಗೆ ಅದು ಬಹಳ ಬೇಸರ. ಹೊಸತನ್ನು ಮಾಡುವ ತುಡಿತ. ತಿನ್ನುವುದಕ್ಕಷ್ಟೇ ಹಾರುವುದರ ಹೊರತಾಗಿ ದೂರಕ್ಕೆ, ಎತ್ತರಕ್ಕೆ, ಹೊಸತಿಗೆ ವೇಗದಲ್ಲಿ ಸಾಗುವ ಅದಮ್ಯ ಬಯಕೆ. ಅವನ ಹಾರುವ ಕನಸಿನ ಶಕ್ತಿಯನ್ನು ಸೀಮಿತಗೊಳಿಸುವ ಅವನ ಪರಿವಾರದೊಂದಿಗೆ ಅವನ ಸಂಘರ್ಷ. ಅವನದು ಉದ್ಧಟತನವೆಂದು ಸೀಗಲ್ ಹಕ್ಕಿಗಳ ಪರಿವಾರ ಅವನನ್ನು ಬಹಿಷ್ಕರಿಸಿದಾಗ ಅವನು ಒಂಟಿ.

ಒಂಟಿಯಾಗಿ ಸಾಗಿದಾಗಲೇ ಹೊಸ ಶಕ್ತಿಗಳ ಪರಿಚಯ. ಅದರಂತೆ ಅವನಿಗೆ ಉನ್ನತಕ್ಕೆ ಹಾರಲು ಉತ್ತೇಜಿಸುವ ಪಕ್ಷಿಗಳ ಸಹವಾಸವಾಗಿ ಅವನು ತರಾವರಿಯಾಗಿ ಬಾನಂಗಳದಲ್ಲಿ ಹಾರಲು ಕಲಿಯುವನು. ವಿವಿಧ ಒಳನೋಟ ಮತ್ತು ಹಾರುವ ಪಾಠಗಳೊಂದಿಗೆ ತನ್ನ ಪರಿವಾರಕ್ಕೆ ಮರಳುವನು.

ಈಗ ಜೊನಾತನನೇ ಗುರು. ಇತರ ಸೀಗಲ್ಲುಗಳು ಅವನಿಂದ ಹಾರಲು ಕಲಿಯುವವು. ತಮ್ಮಲ್ಲಿಯೂ ಅಮಿತವಾದ ಶಕ್ತಿ ಇದೆ ಎಂದು ಅರಿಯುವವು. ಒಟ್ಟಾರೆ ಪರಿವಾರವು ನನ್ನ ಬಗ್ಗೆ ಏನೇ ಹೇಳಿದರೂ, ನಾನು ನಾನಾಗಿ ಇರಲು ಸಂಪೂರ್ಣ ಸ್ವಾತಂತ್ರ್ಯವನ್ನು ನಾನೇ ಪಡೆದುಕೊಳ್ಳಬೇಕು ಎಂದು ಅರ್ಥಮಾಡಿಕೊಳ್ಳುವವು. ಮಿತಿಗಳನ್ನು ಮೀರುವ ನನ್ನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಇಲ್ಲೇ ಈಗಲೇ ನಾನೇ ಪಡೆದುಕೊಳ್ಳಬೇಕು. ನನ್ನತನದ ದಾರಿಯಲ್ಲಿ ಯಾವುದೂ ನನ್ನ ತಡೆಯಲಾಗದು, ನಾನು ಏನಾಗಬೇಕೆಂದು ಬಯಸುತ್ತೇನೆಯೋ ಅದು ಈಗಾಗಲೇ ಆಗಿರುವಂತೆ ಭಾವಿಸಿ, ಆ ಭಾವಶಕ್ತಿಯಿಂದಲೇ ಸಾಧಿಸುವುದು; ಇವೇ ಆ ಪ್ರೇರಣೆಗಳು.

ಇವುಗಳಲ್ಲಿ ಸೂತ್ರಗಳೂ ಇವೆ. ಪ್ರೇಮದಿಂದಲೇ ದುಡಿಯುತ್ತಿರಬೇಕು. ನನ್ನ ದಾರಿಗಡ್ಡ ಬಂದವರನ್ನು ಕ್ಷಮಿಸಬೇಕು. ಕ್ಷಮಿಸುವ ಸಾಮರ್ಥ್ಯವಿಲ್ಲದವನ ಚೈತನ್ಯ ಉನ್ನತಿಗೇರದು.

ಪುಟಪುಟಗಳಲ್ಲಿಯೂ ತಾತ್ವಿಕತೆಯ ಒಳನೋಟಗಳನ್ನು ಹಂಚಿಕೊಳ್ಳುವ ಜೊನಾತನ್ ಅಷ್ಟೊಂದು ಜನಪ್ರಿಯವಾಗಿದ್ದು ನಾನಾ ಕಾರಣಗಳಿಂದ.

ಸ್ವತಃ ಪೈಲೆಟ್ ಆಗಿದ್ದ ರಿಚರ್ಡ್ ಬ್ಯಾಕ್ ತಮ್ಮ ಹಾರುವಿಕೆಯಲ್ಲಿ ಕಂಡುಕೊಂಡಿದ್ದ ಸತ್ಯ, ಸೌಂದರ್ಯ ಮತ್ತು ಅನುಭವಗಳನ್ನೆಲ್ಲಾ ಜೊನಾತನ್ ಸೀಗಲ್ಲಿನಲ್ಲಿ ಪ್ರತಿಫಲಿಸಿದ್ದರು. ಅವರ ಅನುಭವಗಳ ಗಾಢತೆ ಅನುಭೂತಿಯಾಗಿ ಆಧ್ಯಾತ್ಮಿಕತೆಯ ಒಳನೋಟಗಳನ್ನೂ ಈ ಪುಸ್ತಕ ಫಲಿಸಿತ್ತು. ವ್ಯಕ್ತಿಗತವಾಗಿ ಯಾರೊಬ್ಬರೂ ತಮ್ಮ ಮಿತಿಗಳನ್ನು ಮೀರಲು ಇರುವ ಸಾಧ್ಯತೆಗಳ ಕಂಡುಕೊಳ್ಳಲು ಪ್ರೇರಣೆಯಾಗಿತ್ತು. ಸಾಂಪ್ರದಾಯಿಕವಾದ ಸಮಾಜದ ಚೌಕಟ್ಟುಗಳ ಮಿತಿಗಳನ್ನು ಮೀರಲು ಉತ್ತೇಜಿಸಿತ್ತು. ಮಿಗಿಲಾಗಿ ಪುಸ್ತಕ ಓದುತ್ತಿದ್ದರೆ ಜೊನಾತನ್ ಬದುಕನ್ನು ದೃಶ್ಯದಲ್ಲಿಯೇ ಕಟ್ಟಿಕೊಡುವಂತಹ ಶೈಲಿ ಬರವಣಿಗೆಯದಾಗಿತ್ತು.

ಈಗಲೂ ಜೊನಾತನ್ ಬಲ್ಲವರಿಗೆ ಅದೊಂದು ಪ್ರೇರಣೆಯ ರೂಪಕ ಶಕ್ತಿಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...